ನವದೆಹಲಿ: ಹಾಲಿ ಇರುವ ಐಪಿಸಿ, ಸಿಆರ್ ಪಿಸಿಗೆ ಪರ್ಯಾಯ ಎಂದು ಹೇಳಲಾಗುತ್ತಿರುವ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಮಗ್ರಗೊಳಿಸಲು ಸಂಸತ್ತಿನಲ್ಲಿ ಅಂಗೀಕರಿಸಲಾದ ಮೂರು ಮಸೂದೆಗಳಿಗೆ ಸೋಮವಾರ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.
ಈ ಬೆಳವಣಿಗೆಯನ್ನು ರಾಷ್ಟ್ರಪತಿ ಭವನದ ವೆಬ್ಸೈಟ್ನಲ್ಲಿ ತಿಳಿಸಲಾಗಿದ್ದು, ಭಾರತದ ಗೆಜೆಟ್ನಲ್ಲಿ ಇದು ಇನ್ನಷ್ಟೇ ಪ್ರಕಟವಾಗಬೇಕಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳಿಗೆ ಬದಲಾಗಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಬದಲಾಯಿಸಲಿವೆ.
ಮೊದಲು ಆಗಸ್ಟ್ 11ರಂದು ಲೋಕಸಭೆಯಲ್ಲಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷರತಾ ಮಸೂದೆಗಳನ್ನು ಮಂಡಿಸಲಾಗಿತ್ತು. ಇವುಗಳನ್ನು ಡಿಸೆಂಬರ್ 20ರಂದು ಲೋಕಸಭೆ ಅಂಗೀಕರಿಸಿತ್ತು ಮತ್ತು ಡಿಸೆಂಬರ್ 21ರಂದು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿತ್ತು.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…