ರಾಷ್ಟ್ರೀಯ

ಉಪರಾಷ್ಟ್ರಪತಿ ಧನಕರ್‌ಗೆ ಪ್ರಧಾನಿ ಮೋದಿ ಸಾಂತ್ವನ

ಸಂಸತ್‌ ಭವನದ ಮೇಲೆ ದಾಳಿ ನಡೆದ ಬೆನ್ನಲ್ಲೇ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಸಂಸದರ ನಡುವೆ ಸದನದಲ್ಲಿ ಕಿತ್ತಾಟ ಶುರುವಾಗಿದೆ. ಪ್ರತಿಪಕ್ಷದ ಸಂಸದರು ಆರೋಪಿಗಳು ಸಂಸತ್‌ ಪ್ರವೇಶಿಸಲು ಪಾಸ್‌ ನೀಡಿದ ಪ್ರತಾಪ್‌ ಸಿಂಹ ಅವರೂ ಸಹ ಅಪರಾಧಿಯೇ, ಅವರನ್ನೂ ಸಹ ತನಿಖೆ ಮಾಡಿ ಎಂದು ಆರೋಪಿಸಿ ಭದ್ರತಾ ಲೋಪದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಪರಿಣಾಮ ಇಲ್ಲಿಯವರೆಗೆ ಒಟ್ಟು 143 ಸಂಸದರ ಅಮಾನತಾಗಿದೆ.

ಇನ್ನು ಅಮಾನತಾದ ಸಂಸದರ ಪೈಕಿ ಕೆಲವರು ಸಂಸತ್ತಿನ ಮುಂಭಾಗದಲ್ಲಿ ನಿಂತು ಪ್ರತಿಭಟಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಇದರಲ್ಲಿ ತೃಣಮೂಲ ಕಾಂಗ್ರೆಸ್‌ನ ಸಂಸದ ಕಲ್ಯಾಣ್‌ ಬ್ಯಾನರ್ಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರನ್ನು ಅಣುಕು ಮಾಡಿದ್ದರು.

ಈ ಕುರಿತು ಚರ್ಚೆಗಳು ಆರಂಭವಾಗಿದ್ದು, ಉಪರಾಷ್ಟ್ರಪತಿಗಳಿಗೆ ಹಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಾಂತ್ವನ ಹೇಳಿದ್ದಾರೆ. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹ ಈ ಘಟನೆ ಸಂಬಂಧ ಉಪರಾಷ್ಟ್ರಪತಿಗೆ ಕರೆ ಮಾಡುವ ಮೂಲಕ ಸಾಂತ್ವನ ಹೇಳಿದ್ದಾರೆ. ಈ ಕುರಿತು ಸ್ವತಃ ಜಗದೀಪ್‌ ಧನಕರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು “ಪ್ರಧಾನಿ ನರೇಂದ್ರ ಮೋದಿ ಅವರಿಂದ ದೂರವಾಣಿ ಕರೆ ಸ್ವೀಕರಿಸಿದೆ. ಸಂಸತ್‌ ಆವರಣದಲ್ಲಿ ನಿನ್ನೆ ಹಲವು ಗೌರವಾನ್ವಿತ ಸಂಸದರು ಮಾಡಿದ ಅಣಕಿನ ಬಗ್ಗೆ ಪ್ರಧಾನಿಗಳು ನೋವನ್ನು ವ್ಯಕ್ತಪಡಿಸಿದರು. ಇಂತಹ ಅವಮಾನಗಳನ್ನು ನಾನು ಇಪ್ಪತ್ತು ವರ್ಷಗಳಿಂದ ಪಡೆದುಕೊಳ್ಳುತ್ತಾ ಬಂದಿದ್ದೇನೆ ಎಂದೂ ಸಹ ಅವರು ಹೇಳಿದ್ರು” ಎಂದು ಬರೆದುಕೊಂಡಿದ್ದಾರೆ.

andolana

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

10 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

10 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

10 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

11 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

11 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

11 hours ago