ರಾಷ್ಟ್ರೀಯ

ಸಂಸತ್‌ ಭದ್ರತಾ ವೈಫಲ್ಯದ ಬಗ್ಗೆ ಪ್ರಧಾನಿ, ಗೃಹಸಚಿವರು ಉತ್ತರಿಸಬೇಕು- ಸುರ್ಜೇವಾಲ

ಬೆಂಗಳೂರು : ಸಂಸತ್ ಮೇಲಿನ ದಾಳಿಯ ಭದ್ರತಾ ವೈಫಲ್ಯಕ್ಕೆ ಉತ್ತರ ಕೊಡಬೇಕಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾದ ಅಮಿತ್‌ ಶಾ ಅವರ ಕರ್ತವ್ಯ ಎಂದು ಹಿರಿಯ ರಾಜ್ಯ ಸಭಾ ಸದಸ್ಯ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

ಪ್ರಜಾಪ್ರಭುತ್ವದ ಪರಮೋಚ್ಛ ವೇದಿಕೆಯಾಗಿರುವ ಸಂಸತ್ತಿನ ಮೇಲಿನ ದಾಳಿಯ ಹೊಣೆಯನ್ನು ಸರಕಾರವೇ ಹೊರಬೇಕು. ನ್ಯಾಯ ಕೇಳಲು ಬಂದವರನ್ನೇ ಅಮಾನತು ಮಾಡುವುದು ಎಷ್ಟು ಸರಿ? ಇದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಕರಾಳ ದಿನವಾಗಿದೆʼ ಎಂದಿದ್ದಾರೆ.

ರಕ್ಷಣಾ ವೈಫಲ್ಯದ ಬಗ್ಗೆ ಉತ್ತರ ಕೊಡುವಂತೆ ಆಗ್ರಹಿಸಿ ವಿರೋಧ ಪಕ್ಷಗಳು ನ್ಯಾಯಯುತವಾಗಿ ಸಂಸತ್‌ ಕಲಾಪದಲ್ಲಿ ಆಗ್ರಹಿಸಿವೆ. ಆದರೆ, ಪ್ರತಿಪಕ್ಷಗಳ ಮಾತಿಗೆ ಕೇಂದ್ರ ಸರ್ಕಾರವು ಮನ್ನಣೆ ನೀಡದೆ ಹಿಟ್ಲರ್‌ ಧೋರಣೆ ತಾಳಿದೆ ಎಂದು ಅವರು ಕಿಡಿಕಾರಿದ್ದಾರೆ.

ಭದ್ರತಾ ಲೋಪ ಉಂಟಾಗಲು ಕಾರಣರಾದ ಕರ್ನಾಟಕದ ಸಂಸತ್‌ ಸದಸ್ಯ ಪ್ರತಾಪ್‌ ಸಿಂಹ ಅವರನ್ನು ಅಮಾನತು ಮಾಡುವುದನ್ನು ಬಿಟ್ಟು ಪ್ರತಿಪಕ್ಷಗಳ 141 ಸಂಸದರನ್ನು ಅಮಾನತು ಮಾಡಿದೆ. ಇದು ನಿಜಕ್ಕೂ ಖಂಡನೀಯ.

ಭಾರತೀಯ ಸಂಸತ್‌ ವ್ಯವಸ್ಥೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಸಂಸದರನ್ನು ಅಮಾನತು ಮಾಡಿರುವುದು ಇದೇ ಮೊದಲು ಎಂದು ಅವರು ಟೀಕಿಸಿದ್ದಾರೆ.

ಈ ಭದ್ರತಾ ವೈಫಲ್ಯದ ಬಗ್ಗೆ ಉತ್ತರ ಕೊಡಿ ಎಂಬ ಸಣ್ಣ ಬೇಡಿಕೆಯನ್ನು ನಾವು ಕೇಳಿದ್ದವು. ಇಷ್ಟಕ್ಕೆ ಬೆದರಿದ ಆಡಳಿತ ಪಕ್ಷದವರು ವಿರೋಧ ಪಕ್ಷದ 141 ಸಂಸದರನ್ನು ಅಮಾನತು ಮಾಡಿದೆ. ಇವರು ಪ್ರಜಾಪ್ರಭುತ್ವವನ್ನು ಹತ್ತಿಕ್ಕಿ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ ಮುಕ್ತ ಮಾಡುತ್ತೇನೆ ಎಂದು ಹೋದರು. ಆದರೆ, ಅದು ಆಗಲಿಲ್ಲ. ಅದಕ್ಕೆ ಈಗ ವಿರೋಧ ಪಕ್ಷವನ್ನು ಹತ್ತಿಕ್ಕುವ ಕೆಲಸಕ್ಕೆ ಮುಂದಾಗಿದ್ದಾರೆ.

ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷವೇ ಇರಬಾರದು ಎಂಬುದು ಇವರ ಅಜೆಂಡಾ ಆಗಿದೆ ಎಂಬುದು ಇಲ್ಲಿ ಸ್ಪಷ್ಟವಾಗಿದೆ ಎಂದೂ ಕಿಡಿ ಕಾರಿದ್ದಾರೆ.

ಚರ್ಚೆಗೆ ಅವಕಾಶ ಕೊಡುವುದು ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆ. ದೇಶದಲ್ಲಿ ಎಂಥ ಘಟನೆಗಳೇ ನಡೆದರೂ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ಸ್ಥಳ ಸಂಸತ್‌ ಮಾತ್ರ.

ಅಲ್ಲಿಯೇ ಪರಿಹಾರವನ್ನು ಕಂಡುಕೊಳ್ಳಬೇಕು. ಇನ್ನು ಆಡಳಿತ ಪಕ್ಷದಲ್ಲಿರುವವರು ಕಿವಿಯಾಗಿರಬೇಕು. ಪ್ರತಿಪಕ್ಷಗಳ ಚರ್ಚೆಯನ್ನು, ಸಲಹೆಯನ್ನು ಕೇಳಿಸಿಕೊಳ್ಳಬೇಕು. ಆದರೆ, ಇಲ್ಲಿ ಅದ್ಯಾವುದೂ ಆಗುತ್ತಿಲ್ಲ.

ಈಗ ಬಿಜೆಪಿ ಸರ್ಕಾರವು ಕಣ್ಣು, ಕಿವಿ ಎಲ್ಲವನ್ನೂ ಮುಚ್ಚಿ ಇಂತಹ ವರ್ತನೆ ಮಾಡುತ್ತಿದೆ. ಸಂಸತ್‌ ಇತಿಹಾಸಕ್ಕೆ ಇದೊಂದು ಕಪ್ಪು ಚುಕ್ಕೆ ಎಂದು ಟೀಕಿಸಿದ್ದಾರೆ.

andolanait

Recent Posts

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

5 mins ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

11 mins ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

8 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

8 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

8 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

8 hours ago