ರಾಷ್ಟ್ರೀಯ

ಸಮುದ್ರ ಸೇತುವೆ ‘ಅಟಲ್ ಸೇತು’ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಮುಂಬೈ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿನಲ್ಲಿ 17,840 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿರುವ ಅಟಲ್ ಬಿಹಾರಿ ವಾಜಪೇಯಿ ಸೇವಾರಿ – ನವ ಶೇವಾ ‘ಅಟಲ್ ಸೇತು’ ವನ್ನು ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ಲೋಕಾರ್ಪಣೆಗೊಳಿಸಿದರು.

ಮೋದಿ ಅವರು 2016ರ ಡಿಸೆಂಬರ್ ತಿಂಗಳಿನಲ್ಲಿ ಈ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇದು ಭಾರತದ ಅತಿ ಉದ್ದದ ಸಮುದ್ರ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಅಟಲ್ ಸೇತು ಸುಮಾರು 21.8 ಕಿಮೀ ಉದ್ದದ ಆರು-ಪಥದ ಸೇತುವೆಯಾಗಿದ್ದು, 5.5 ಕಿಮೀ ಭೂಮಿಯ ಮೇಲೆ ಮತ್ತು 16.5 ಕಿಮೀ ಸಮುದ್ರದ ಮೇಲೆ ಇದನ್ನು ನಿರ್ಮಿಸಲಾಗಿದೆ.

ಇದು ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೇಗದ ಸಂಪರ್ಕವನ್ನು ಒದಗಿಸುತ್ತದೆ. ಮುಂಬೈನಿಂದ ಪುಣೆ, ಗೋವಾ ಮತ್ತು ದಕ್ಷಿಣ ಭಾರತಕ್ಕೆ ಪ್ರಯಾಣದ ಸಮಯವನ್ನು ತಗ್ಗಿಸುತ್ತದೆ. ಜತೆಗೆ ಮುಂಬೈ ಬಂದರು ಮತ್ತು ಜವಾಹರಲಾಲ್ ನೆಹರು ಬಂದರು ನಡುವಿನ ಸಂಪರ್ಕವನ್ನು ಸುಧಾರಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮಖ್ಯಮಂತ್ರಿ ಏಕನಾಥ್‌ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್‌, ಅಜಿತ್‌ ಪವಾರ್‌ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

27ನೇ ರಾಷ್ಟ್ರೀಯ ಯುವದಿನ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಹಾರಾಷ್ಟ್ರದಲ್ಲಿ 30,500 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago