ಅಯೋಧ್ಯೆ: ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಂತರ ಇಂದು (ಜನವರಿ 22) ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ʼರಾಮ ಜ್ಯೋತಿʼ ಬೆಳಗಿಸಿದ್ದಾರೆ. ಜೊತೆಗೆ ಈ ಶುಭ ಸಮಾರಂಭದಲ್ಲಿ ದೇಶವಾಸಿಗಳೆಲ್ಲರು ತಮ್ಮ ಮನೆಯಲ್ಲಿ ರಾಮ ಜ್ಯೋತಿಯನ್ನು ಬೆಳಗಿಸುವ ಮೂಲಕ ರಾಮಲಲ್ಲಾರನ್ನು ಸ್ವಾಗತಿಸುವಂತೆ ಪ್ರಧಾನಿ ಮೋದಿ ಅವರು ಕರೆ ನೀಡಿದ್ದಾರೆ.
ಎಲ್ಲಾ ದೇಶವಾಸಿಗಳು ರಾಮ ಜ್ಯೋತಿಯನ್ನು ಬೆಳಗಿಸುವ ಮೂಲಕ ಶ್ರೀರಾಮರನ್ನು ಸ್ವಾಗತಿಸಲು ನಾನು ವಿನಂತಿಸುತ್ತೇನೆ ಎಂದು ಜೈ ಸಿಯಾ ರಾಮ್ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಅವರ ಕರೆಗೆ ಅಂಗಡಿ ಮುಗ್ಗಟ್ಟುಗಳು, ಧಾರ್ಮಿಕ ಸ್ಥಳಗಳು, ಐತಿಹಾಸಿಕ ಸ್ಥಳಗಳಲ್ಲಿ ದೀಪ ಬೆಳಗಿಸುವ ಮೂಲಕ ರಾಮನಿಗೆ ಸ್ವಾಗತ ಕೋರಿದ್ದಾರೆ.
ಇದಕ್ಕೂ ಮೊದಲು, ಪ್ರಾದೇಶಿಕ ಪ್ರವಾಸೋದ್ಯಮ ಅಧಿಕಾರಿ ಆರ್.ಪಿ ಯಾದವ್, ಜನವರಿ 22 ರ ಸಂಜೆಯಂದು 100 ಪ್ರಮುಖ ದೇವಾಲಯಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ದೀಪಗಳನ್ನು ಬೆಳಗಿಸಲಾಗುತ್ತದೆ ಎಂದು ಹೇಳಿದ್ದರು.
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…