ರಾಷ್ಟ್ರೀಯ

ರಾಮಮಂದಿರ ‘ಪ್ರಾಣ ಪ್ರತಿಷ್ಠಾಪನೆ’ ನಂತರ ʼರಾಮ ಜ್ಯೋತಿʼ ಬೆಳಗಿದ ಪ್ರಧಾನಿ ಮೋದಿ

ಅಯೋಧ್ಯೆ: ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಂತರ ಇಂದು (ಜನವರಿ 22) ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ʼರಾಮ ಜ್ಯೋತಿʼ ಬೆಳಗಿಸಿದ್ದಾರೆ. ಜೊತೆಗೆ ಈ ಶುಭ ಸಮಾರಂಭದಲ್ಲಿ ದೇಶವಾಸಿಗಳೆಲ್ಲರು ತಮ್ಮ ಮನೆಯಲ್ಲಿ ರಾಮ ಜ್ಯೋತಿಯನ್ನು ಬೆಳಗಿಸುವ ಮೂಲಕ ರಾಮಲಲ್ಲಾರನ್ನು ಸ್ವಾಗತಿಸುವಂತೆ ಪ್ರಧಾನಿ ಮೋದಿ ಅವರು ಕರೆ ನೀಡಿದ್ದಾರೆ.

ಎಲ್ಲಾ ದೇಶವಾಸಿಗಳು ರಾಮ ಜ್ಯೋತಿಯನ್ನು ಬೆಳಗಿಸುವ ಮೂಲಕ ಶ್ರೀರಾಮರನ್ನು ಸ್ವಾಗತಿಸಲು ನಾನು ವಿನಂತಿಸುತ್ತೇನೆ ಎಂದು ಜೈ ಸಿಯಾ ರಾಮ್‌ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್‌ ಅವರ ಕರೆಗೆ ಅಂಗಡಿ ಮುಗ್ಗಟ್ಟುಗಳು, ಧಾರ್ಮಿಕ ಸ್ಥಳಗಳು, ಐತಿಹಾಸಿಕ ಸ್ಥಳಗಳಲ್ಲಿ ದೀಪ ಬೆಳಗಿಸುವ ಮೂಲಕ ರಾಮನಿಗೆ ಸ್ವಾಗತ ಕೋರಿದ್ದಾರೆ.

ಇದಕ್ಕೂ ಮೊದಲು, ಪ್ರಾದೇಶಿಕ ಪ್ರವಾಸೋದ್ಯಮ ಅಧಿಕಾರಿ ಆರ್‌.ಪಿ ಯಾದವ್, ಜನವರಿ 22 ರ ಸಂಜೆಯಂದು 100 ಪ್ರಮುಖ ದೇವಾಲಯಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ದೀಪಗಳನ್ನು ಬೆಳಗಿಸಲಾಗುತ್ತದೆ ಎಂದು ಹೇಳಿದ್ದರು.

 

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

2 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

3 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

4 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

4 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

5 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago