ರಾಷ್ಟ್ರೀಯ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು: ಶಿವರಾಜ್‌ಕುಮಾರ್ ಒತ್ತಾಯ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಿ ಎರಡು ರಾಜ್ಯಗಳ ಜತೆ ಮಾತುಕತೆ ನಡೆಸಿದರೆ ಕಾವೇರಿ ಜಲ ವಿವಾದ ಬಗೆಹರಿಯುತ್ತದೆ. ಆದ್ದರಿಂದ ಪ್ರಧಾನಿ ಮಧ್ಯಪ್ರವೇಶ ಮಾಡಬೇಕು ಎಂದು ಹಿರಿಯ ನಟ ಶಿವರಾಜ್‍ಕುಮಾರ್ ಹೇಳಿದ್ದಾರೆ.

ಮದ್ದೂರು ತಾಲೂಕು ವಳೆಗೆರೆಹಳ್ಳಿ ಗ್ರಾಮದಲ್ಲಿ ಮಾನಸ ಎಜುಕೇಷನ್ ಟ್ರಸ್ಟ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಿ.ಕರಡೀಗೌಡ ಪ್ರತಿಷ್ಠಾನದ ವತಿಯಿಂದ ರವಿವಾರ ನಡೆದ ಕಾರ್ಯಕ್ರಮದಲ್ಲಿ ಕಲಾಕೌಸ್ತಭ ಪ್ರಶಸ್ತಿ ಸ್ವೀಕರಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಕಾವೇರಿ ವಿಚಾರದಲ್ಲಿ ರೈತರಪರ ಚಿತ್ರರಂಗ ಸದಾ ಜತೆಯಲ್ಲಿ ನಿಲ್ಲುತ್ತದೆ. ಹೋರಾಟದ ಮೂಲಕ ಆಳುವ ಸರಕಾರಗಳ ಮೇಲೆ ಒತ್ತಡ ತರಬೇಕು. ದೊಡ್ಡಮಟ್ಟದ ಹೋರಾಟ ರೂಪಿಸಬೇಕು. ಆದರೆ, ಹೋರಾಟ ಶಾಂತಿಯುತವಾಗಿರಬೇಕು ಎಂದು ಅವರು ಹೇಳಿದರು.

ನಾನು ರಾಜಕೀಯ ಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ. ಸಿನೆಮಾ ಕ್ಷೇತ್ರದಲ್ಲಿ ಸಂತೃಪ್ತಿ ಇದೆ. ಪತ್ನಿ ಗೀತಾ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಇರಲಿದ್ದಾರೆ. ಅವರು ಯಾವ ಕ್ಷೇತ್ರದಲ್ಲಿ ಸ್ವರ್ದೆ ಮಾಡುತ್ತಾರೋ ಗೊತ್ತಿಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ನಾನು ಅವರ ಜತೆಗಿರುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಕರಡಿಗೌಡರ ಹೆಸರಲ್ಲಿ ನನಗೆ ಪ್ರಶಸ್ತಿ ದೊರೆತಿರುವುದು ಅತ್ಯಂತ ಸಂತೋಷ ತಂದಿದೆ. ‘ಘೋಸ್ಟ್’ ಚಲನಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ವಿಭಿನ್ನ ಮಾದರಿಯ ಚಿತ್ರವನ್ನು ಕನ್ನಡಿಗರು ಸ್ವೀಕರಿಸಿರುವುದು ಖುಷಿಯ ವಿಚಾರ ಎಂದು ಅವರು ಪ್ರತಿಕ್ರಿಯಿಸಿದರು.

ಮೈಸೂರಿನ ದೀನಬಂಧು ಮಕ್ಕಳ ಮನೆಯ ಗೌರವ ಕಾರ್ಯದರ್ಶಿ ಪ್ರೊ.ಜಿ.ಎಸ್.ಜಯದೇವ ಅವರಿಗೆ ಕರಡೀಗೌಡ ಸಮಾಜ ಸೇವಾ ಪ್ರಶಸ್ತಿ ಪ್ರಧಾನಿಸಲಾಯಿತು. ತಲಾ 50 ಸಾವಿರ ರೂ. ನಗದು ಪ್ರಶಸ್ತಿ ಫಲಕ ಹೊಂದಿದ್ದ ಪ್ರಶಸ್ತಿಯನ್ನು ನಿವೃತ್ತ ನ್ಯಾಯಧೀಶ ಟಿ.ಜಿ.ಶಿವಶಂಕರೇಗೌಡ ಪ್ರದಾನ ಮಾಡಿದರು.

ನಿವೃತ್ತ ಲೋಕಾಯುಕ್ತ ನ್ಯಾ.ಎನ್.ಸಂತೋಷ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಪ್ರಾಧ್ಯಾಪಕಿ ಪ್ರೊ.ಎನ್.ಕೆ.ಲೋಲಾಕ್ಷಿ ಅಭಿನಂದನಾ ಭಾಷಣ ಮಾಡಿದರು. ಪ್ರತಿಷ್ಠಾನದ ಅಧ್ಯಕ್ಷ ವಿ.ಕೆ.ಜಗದೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

“ಕೋರ್ಟ್‍ನಿಂದ ಕಾವೇರಿಗೆ ಪರಿಹಾರ ಸಿಗುವುದಿಲ್ಲ. ಬದಲಾಗಿ ರಾಜ್ಯ ಸರಕಾರವು ವಾಸ್ತವ ಪರಿಸ್ಥಿತಿ ಅರಿಯಲು ತಜ್ಞರ ಸಮಿತಿಯನ್ನು ರಾಜ್ಯಕ್ಕೆ ಕಳುಹಿಸಲು ಅರ್ಜಿ ಸಲ್ಲಿಸಬೇಕು. ಆಗ ಮಾತ್ರ ರಾಜ್ಯಕ್ಕೆ ನ್ಯಾಯ ಸಿಗುತ್ತದೆ. ಇನ್ನು ರಾಜಕಾರಣ ಇಂದು ವೃತ್ತಿಯಾಗಿ ಪರಿವರ್ತನೆಯಾಗಿದೆ. ಸಂಬಳ, ಸವಲತ್ತು ಸೇರಿದಂತೆ ಕೈತುಂಬಾ ಹಣ ಬರುತ್ತದೆ. ಹಾಗಾಗಿ ನಿವೃತ್ತ ಅಧಿಕಾರಿಗಳು ಸೇರಿದಂತೆ ಎಲ್ಲರೂ ರಾಜಕಾರಣಕ್ಕೆ ಬರುತ್ತಿದ್ದಾರೆ. ಜನರು ಪ್ರಜ್ಞಾವಂತರಾಗಬೇಕು. ಸೇವೆಯನ್ನು ಗುರಿಯಾಗಿಸಿಕೊಂಡವರನ್ನು ಗೆಲ್ಲಿಸಬೇಕು.”

-ಎನ್.ಸಂತೋಷ್ ಹೆಗ್ಡೆ, ನಿವೃತ್ತ ಲೋಕಾಯುಕ್ತ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago