ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಸಮಸ್ತ ಜನತೆಗೆ ಕಾರ್ತಿಕ ಪೂರ್ಣಿಮ ಮತ್ತು ದೇವ್ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, ಎಲ್ಲರಿಗೂ ಭಾರತೀಯ ಸಾಂಪ್ರದಯದ ಆಚರಣೆಯ ಭಾಗವಾದ ಕಾರ್ತಿಕ ಪೂರ್ಣಿಮ ಮತ್ತು ದೇವ್ ದೀಪಾವಳಿ ಹಬ್ಬದ ಶುಭಾಶಯಗಳು. ಈ ದಿನ ದೇಶದ ಎಲ್ಲಾ ನನ್ನ ಕುಟುಂಬ ಸದಸ್ಯರ ಜೀವನದಲ್ಲಿ ಹೊಸ ಬೆಳಕು ಹಾಗೂ ಚೈತನ್ಯ ತರಲಿ ಎಂದು ಬಯಸುತ್ತೇನೆ ಎಂದು ಹೇಳಿದ್ದಾರೆ.
ನಂಬಿಕೆಗಳ ಪ್ರಕಾರ, ಈ ದಿನ ಶಿವನು ತ್ರಿಪುರಾಸುರನನ್ನು ಕೊಂದನು ಎನ್ನಲಾಗುತ್ತದೆ. ತ್ರಿಪುರಾಸುರನ ವಧೆಯಿಂದ ಸಂತಸಗೊಂಡ ದೇವತೆಗಳು ಕಾಶಿಯಲ್ಲಿ ಅನೇಕ ದೀಪಗಳನ್ನು ಬೆಳಗಿಸಿದರು. ಅದಕ್ಕಾಗಿಯೇ ಇದನ್ನು ದೇವ ದೀಪಾವಳಿ ಎಂದೂ ಕರೆಯುತ್ತಾರೆ.
ಕಾರ್ತಿಕ ಪೂರ್ಣಿಮೆಯ ದಿನ, ಪ್ರದೋಷ ಕಾಲದಲ್ಲಿ ನದಿ, ಕೊಳದಲ್ಲಿ ದೀಪವನ್ನು ದಾನ ಮಾಡುವುದಕ್ಕೆ ವಿಶೇಷ ಮಹತ್ವವಿದೆ. ಈ ದಿನ ಬ್ರಹ್ಮ ಮುಹೂರ್ತದಂದು ಬೆಳಗ್ಗೆ ನದಿ ಅಥವಾ ಕೊಳದಲ್ಲಿ ದೀಪವನ್ನು ಹಚ್ಚಿ ಹರಿಯುವಂತೆ ಮಾಡಿ. ದೀಪವನ್ನು ದಾನ ಮಾಡುವುದರಿಂದ ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…