ರಾಷ್ಟ್ರೀಯ

ಕಾರ್ತಿಕ ಪೂರ್ಣಿಮ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಸಮಸ್ತ ಜನತೆಗೆ ಕಾರ್ತಿಕ ಪೂರ್ಣಿಮ ಮತ್ತು ದೇವ್‌ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ, ಎಲ್ಲರಿಗೂ ಭಾರತೀಯ ಸಾಂಪ್ರದಯದ ಆಚರಣೆಯ ಭಾಗವಾದ ಕಾರ್ತಿಕ ಪೂರ್ಣಿಮ ಮತ್ತು ದೇವ್‌ ದೀಪಾವಳಿ ಹಬ್ಬದ ಶುಭಾಶಯಗಳು. ಈ ದಿನ ದೇಶದ ಎಲ್ಲಾ ನನ್ನ ಕುಟುಂಬ ಸದಸ್ಯರ ಜೀವನದಲ್ಲಿ ಹೊಸ ಬೆಳಕು ಹಾಗೂ ಚೈತನ್ಯ ತರಲಿ ಎಂದು ಬಯಸುತ್ತೇನೆ ಎಂದು ಹೇಳಿದ್ದಾರೆ.

ನಂಬಿಕೆಗಳ ಪ್ರಕಾರ, ಈ ದಿನ ಶಿವನು ತ್ರಿಪುರಾಸುರನನ್ನು ಕೊಂದನು ಎನ್ನಲಾಗುತ್ತದೆ. ತ್ರಿಪುರಾಸುರನ ವಧೆಯಿಂದ ಸಂತಸಗೊಂಡ ದೇವತೆಗಳು ಕಾಶಿಯಲ್ಲಿ ಅನೇಕ ದೀಪಗಳನ್ನು ಬೆಳಗಿಸಿದರು. ಅದಕ್ಕಾಗಿಯೇ ಇದನ್ನು ದೇವ ದೀಪಾವಳಿ ಎಂದೂ ಕರೆಯುತ್ತಾರೆ.

ಕಾರ್ತಿಕ ಪೂರ್ಣಿಮೆಯ ದಿನ, ಪ್ರದೋಷ ಕಾಲದಲ್ಲಿ ನದಿ, ಕೊಳದಲ್ಲಿ ದೀಪವನ್ನು ದಾನ ಮಾಡುವುದಕ್ಕೆ ವಿಶೇಷ ಮಹತ್ವವಿದೆ. ಈ ದಿನ ಬ್ರಹ್ಮ ಮುಹೂರ್ತದಂದು ಬೆಳಗ್ಗೆ ನದಿ ಅಥವಾ ಕೊಳದಲ್ಲಿ ದೀಪವನ್ನು ಹಚ್ಚಿ ಹರಿಯುವಂತೆ ಮಾಡಿ. ದೀಪವನ್ನು ದಾನ ಮಾಡುವುದರಿಂದ ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ.

https://x.com/narendramodi/status/1728955675819348090?s=20

andolanait

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

1 hour ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

5 hours ago