ನವದೆಹಲಿ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಅಂಚೆ ಚೀಟಿಗಳನ್ನು ಮತ್ತು ವಿಶ್ವದಾದ್ಯಂತ ರಾಮನ ಕುರಿತು ಬಿಡುಗಡೆ ಮಾಡಲಾದ ಅಂಚೆ ಚೀಟಿ ಪುಸ್ತಕವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಿಡುಗಡೆ ಮಾಡಿದರು.
https://x.com/PTI_News/status/1747870922579558485?s=20
ಈ ಅಂಚೆ ಚೀಟಿಯಲ್ಲಿ ರಾಮ ಮಂದಿರ, ರಾಮಾಯಣ ಚೌಪಾಯಿ ‘ಮಂಗಲ್ ಭವನ ಅಮಂಗಲ್ ಹರಿ’, ಸೂರ್ಯ, ಸರಯೂ ನದಿ ಮತ್ತು ದೇವಾಲಯದ ಸುತ್ತಮುತ್ತಲಿನ ಶಿಲ್ಪಗಳು ಸೇರಿವೆ. ಆರು ಅಂಚೆಚೀಟಿಗಳು ರಾಮ ಮಂದಿರ, ಗಣೇಶ, ಹನುಮಾನ್, ಜಟಾಯು, ಕೇವತ್ರಾಜ್ ಮತ್ತು ಮಾ ಶಬರಿ ಬಗ್ಗೆ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂಚೆ ಚೀಟಿ ಪುಸ್ತಕವು 48 ಪುಟಗಳಿಂದ ಕೂಡಿದ್ದು, ಯುಎಸ್ಎ, ನ್ಯೂಜಿಲೆಂಡ್ಸ್, ಸಿಂಗಾಪುರ, ಕೆನಡಾ, ಕಾಂಬೋಡಿಯಾ ಮತ್ತು ಯುಎನ್ ಸೇರಿದಂತೆ 20ಕ್ಕೂ ಹೆಚ್ಚು ದೇಶಗಳು ಭಗವಾನ್ ರಾಮನ ಅಂಚೆ ಚೀಟಿಗಳನ್ನು ಒಳಗೊಂಡಿದೆ.
ರಾಮಮಂದಿರ ಪ್ರಾಣ ಪ್ರತಿಷ್ಠಾಪನ ಸಮಾರಂಭಕ್ಕೆ ಸಂಬಂಧಿಸಿದ ಮತ್ತೊಂದು ಕಾರ್ಯಕ್ರಮದಲ್ಲಿ ನನ್ನನ್ನು ತೊಡಗಿಸಿಕೊಳ್ಳಲು ನನಗಿಂದು ಅವಕಾಶ ದೊರಕಿತು. ಇಂದು, ರಾಮಮಂದಿರಕ್ಕೆ ಸಮರ್ಪಿತವಾದ ಆರು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಲಾಯಿತು. ಜೊತೆಗೆ, ವಿಶ್ವದಾದ್ಯಂತ ಭಗವಾನ್ ರಾಮನ ಮೇಲೆ ಬಿಡುಗಡೆಯಾದ ಅಂಚೆ ಚೀಟಿಗಳ ಪುಸ್ತಕವನ್ನು ಸಹಾ ಬಿಡುಗಡೆಗೊಳಿಸಲಾಯಿತು ಎಂದು ಪ್ರಧಾನಿ ಮೋದಿ ಹೇಳಿದರು.
ರಾಮಾಯಣವು ಎಲ್ಲಾ ಸವಾಲುಗಳ ನಡುವೆಯೂ ಪ್ರೀತಿಯ ವಿಜಯದ ಬಗ್ಗೆ ನಮಗೆ ಕಲಿಸುತ್ತದೆ. ಇದು ಇಡೀ ಮಾನವೀಯತೆಯನ್ನು ತನ್ನೊಂದಿಗೆ ಸಂಪರ್ಕಿಸುತ್ತದೆ. ಅದಕ್ಕಾಗಿಯೇ ಅದು ಇಡೀ ಪ್ರಪಂಚದಾದ್ಯಂತ ಗಮನ ಸೆಳೆದಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…