ರಾಷ್ಟ್ರೀಯ

ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ

ನವದೆಹಲಿ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಅಂಚೆ ಚೀಟಿಗಳನ್ನು ಮತ್ತು ವಿಶ್ವದಾದ್ಯಂತ ರಾಮನ ಕುರಿತು ಬಿಡುಗಡೆ ಮಾಡಲಾದ ಅಂಚೆ ಚೀಟಿ ಪುಸ್ತಕವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಿಡುಗಡೆ ಮಾಡಿದರು.

https://x.com/PTI_News/status/1747870922579558485?s=20

ಈ ಅಂಚೆ ಚೀಟಿಯಲ್ಲಿ ರಾಮ ಮಂದಿರ, ರಾಮಾಯಣ ಚೌಪಾಯಿ ‘ಮಂಗಲ್ ಭವನ ಅಮಂಗಲ್ ಹರಿ’, ಸೂರ್ಯ, ಸರಯೂ ನದಿ ಮತ್ತು ದೇವಾಲಯದ ಸುತ್ತಮುತ್ತಲಿನ ಶಿಲ್ಪಗಳು ಸೇರಿವೆ. ಆರು ಅಂಚೆಚೀಟಿಗಳು ರಾಮ ಮಂದಿರ, ಗಣೇಶ, ಹನುಮಾನ್, ಜಟಾಯು, ಕೇವತ್ರಾಜ್ ಮತ್ತು ಮಾ ಶಬರಿ ಬಗ್ಗೆ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಚೆ ಚೀಟಿ ಪುಸ್ತಕವು 48 ಪುಟಗಳಿಂದ ಕೂಡಿದ್ದು, ಯುಎಸ್‌ಎ, ನ್ಯೂಜಿಲೆಂಡ್ಸ್‌, ಸಿಂಗಾಪುರ, ಕೆನಡಾ, ಕಾಂಬೋಡಿಯಾ ಮತ್ತು ಯುಎನ್‌ ಸೇರಿದಂತೆ 20ಕ್ಕೂ ಹೆಚ್ಚು ದೇಶಗಳು ಭಗವಾನ್‌ ರಾಮನ ಅಂಚೆ ಚೀಟಿಗಳನ್ನು ಒಳಗೊಂಡಿದೆ.

ರಾಮಮಂದಿರ ಪ್ರಾಣ ಪ್ರತಿಷ್ಠಾಪನ ಸಮಾರಂಭಕ್ಕೆ ಸಂಬಂಧಿಸಿದ ಮತ್ತೊಂದು ಕಾರ್ಯಕ್ರಮದಲ್ಲಿ ನನ್ನನ್ನು ತೊಡಗಿಸಿಕೊಳ್ಳಲು ನನಗಿಂದು ಅವಕಾಶ ದೊರಕಿತು. ಇಂದು, ರಾಮಮಂದಿರಕ್ಕೆ ಸಮರ್ಪಿತವಾದ ಆರು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಲಾಯಿತು. ಜೊತೆಗೆ, ವಿಶ್ವದಾದ್ಯಂತ ಭಗವಾನ್ ರಾಮನ ಮೇಲೆ ಬಿಡುಗಡೆಯಾದ ಅಂಚೆ ಚೀಟಿಗಳ ಪುಸ್ತಕವನ್ನು ಸಹಾ ಬಿಡುಗಡೆಗೊಳಿಸಲಾಯಿತು ಎಂದು ಪ್ರಧಾನಿ ಮೋದಿ ಹೇಳಿದರು.

ರಾಮಾಯಣವು ಎಲ್ಲಾ ಸವಾಲುಗಳ ನಡುವೆಯೂ ಪ್ರೀತಿಯ ವಿಜಯದ ಬಗ್ಗೆ ನಮಗೆ ಕಲಿಸುತ್ತದೆ. ಇದು ಇಡೀ ಮಾನವೀಯತೆಯನ್ನು ತನ್ನೊಂದಿಗೆ ಸಂಪರ್ಕಿಸುತ್ತದೆ. ಅದಕ್ಕಾಗಿಯೇ ಅದು ಇಡೀ ಪ್ರಪಂಚದಾದ್ಯಂತ ಗಮನ ಸೆಳೆದಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

53 mins ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

1 hour ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

1 hour ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

11 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

11 hours ago