ನವದೆಹಲಿ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಅಂಚೆ ಚೀಟಿಗಳನ್ನು ಮತ್ತು ವಿಶ್ವದಾದ್ಯಂತ ರಾಮನ ಕುರಿತು ಬಿಡುಗಡೆ ಮಾಡಲಾದ ಅಂಚೆ ಚೀಟಿ ಪುಸ್ತಕವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಿಡುಗಡೆ ಮಾಡಿದರು.
https://x.com/PTI_News/status/1747870922579558485?s=20
ಈ ಅಂಚೆ ಚೀಟಿಯಲ್ಲಿ ರಾಮ ಮಂದಿರ, ರಾಮಾಯಣ ಚೌಪಾಯಿ ‘ಮಂಗಲ್ ಭವನ ಅಮಂಗಲ್ ಹರಿ’, ಸೂರ್ಯ, ಸರಯೂ ನದಿ ಮತ್ತು ದೇವಾಲಯದ ಸುತ್ತಮುತ್ತಲಿನ ಶಿಲ್ಪಗಳು ಸೇರಿವೆ. ಆರು ಅಂಚೆಚೀಟಿಗಳು ರಾಮ ಮಂದಿರ, ಗಣೇಶ, ಹನುಮಾನ್, ಜಟಾಯು, ಕೇವತ್ರಾಜ್ ಮತ್ತು ಮಾ ಶಬರಿ ಬಗ್ಗೆ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂಚೆ ಚೀಟಿ ಪುಸ್ತಕವು 48 ಪುಟಗಳಿಂದ ಕೂಡಿದ್ದು, ಯುಎಸ್ಎ, ನ್ಯೂಜಿಲೆಂಡ್ಸ್, ಸಿಂಗಾಪುರ, ಕೆನಡಾ, ಕಾಂಬೋಡಿಯಾ ಮತ್ತು ಯುಎನ್ ಸೇರಿದಂತೆ 20ಕ್ಕೂ ಹೆಚ್ಚು ದೇಶಗಳು ಭಗವಾನ್ ರಾಮನ ಅಂಚೆ ಚೀಟಿಗಳನ್ನು ಒಳಗೊಂಡಿದೆ.
ರಾಮಮಂದಿರ ಪ್ರಾಣ ಪ್ರತಿಷ್ಠಾಪನ ಸಮಾರಂಭಕ್ಕೆ ಸಂಬಂಧಿಸಿದ ಮತ್ತೊಂದು ಕಾರ್ಯಕ್ರಮದಲ್ಲಿ ನನ್ನನ್ನು ತೊಡಗಿಸಿಕೊಳ್ಳಲು ನನಗಿಂದು ಅವಕಾಶ ದೊರಕಿತು. ಇಂದು, ರಾಮಮಂದಿರಕ್ಕೆ ಸಮರ್ಪಿತವಾದ ಆರು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಲಾಯಿತು. ಜೊತೆಗೆ, ವಿಶ್ವದಾದ್ಯಂತ ಭಗವಾನ್ ರಾಮನ ಮೇಲೆ ಬಿಡುಗಡೆಯಾದ ಅಂಚೆ ಚೀಟಿಗಳ ಪುಸ್ತಕವನ್ನು ಸಹಾ ಬಿಡುಗಡೆಗೊಳಿಸಲಾಯಿತು ಎಂದು ಪ್ರಧಾನಿ ಮೋದಿ ಹೇಳಿದರು.
ರಾಮಾಯಣವು ಎಲ್ಲಾ ಸವಾಲುಗಳ ನಡುವೆಯೂ ಪ್ರೀತಿಯ ವಿಜಯದ ಬಗ್ಗೆ ನಮಗೆ ಕಲಿಸುತ್ತದೆ. ಇದು ಇಡೀ ಮಾನವೀಯತೆಯನ್ನು ತನ್ನೊಂದಿಗೆ ಸಂಪರ್ಕಿಸುತ್ತದೆ. ಅದಕ್ಕಾಗಿಯೇ ಅದು ಇಡೀ ಪ್ರಪಂಚದಾದ್ಯಂತ ಗಮನ ಸೆಳೆದಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…