ನವದೆಹಲಿ: ಕುಸ್ತಿಪಟುಗಳಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕುಸ್ತಿಪಟು ಸಾಕ್ಷಿ ಮಲಿಕ್ ಅವರಿಗೆ ಭರವಸೆ ನೀಡಿದ್ದಾರೆ.
ತಮ್ಮ ಹೋರಾಟಕ್ಕೆ ನ್ಯಾಯ ಸಿಗದ ಕಾರಣ ಕುಸ್ತಿಗೆ ವಿದಾಯ ಹೇಳಿದ ಬೆನ್ನಲ್ಲೇ ಸಾಕ್ಷಿ ಮಲಿಕ್ ಅವರನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ, ತಮ್ಮ ನಿರ್ಧಾರದಿಂದ ಹಿಂದೆ ಸರಿಯುವಂತೆ ಅವರಿಗೆ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಿಯಾಂಕಾ ಗಾಂಧಿ, ‘ಕುಸ್ತಿಪಟು ಸಾಕ್ಷಿ ಮಲಿಕ್ ಅವರನ್ನು ಭೇಟಿ ಮಾಡಿದ್ದು, ಪ್ರಸಕ್ತ ಬೆಳವಣಿಗೆಯಿಂದ ಅವರು ತುಂಬಾ ನೊಂದುಕೊಂಡಿದ್ದಾರೆ. ನ್ಯಾಯ ಸಿಗುವವರೆಗೂ ಕುಸ್ತಿಗೆ ವಿದಾಯ ಹೇಳುವ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವಂತೆ ತಿಳಿಸಿದ್ದೇನೆ’ ಎಂದರು.
ದೇಶಕ್ಕೆ ಕೀರ್ತಿ ತಂದ ಮಹಿಳಾ ಕುಸ್ತಿಪಟುಗಳು ಬಿಜೆಪಿ ಸಂಸದರೊಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಆದರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಕಿಡಿಕಾರಿದರು.
ಭಾರತ ಕುಸ್ತಿ ಫೆಡರೇಷನ್ನ ಅಧ್ಯಕ್ಷರಾಗಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಕುಮಾರ್ ಸಿಂಗ್ ಅವರು ಆಯ್ಕೆಯಾಗಿದ್ದು, ಇದನ್ನು ವಿರೋಧಿಸಿ ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದ್ದರು.
‘ಬ್ರಿಜ್ ಭೂಷಣ್ ಅವರ ಆಪ್ತ ಡಬ್ಲ್ಯುಎಫ್ಐ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ, ನಾನು ಕುಸ್ತಿ ತ್ಯಜಿಸುತ್ತೇನೆ. ಇಂದಿನಿಂದ ನೀವು ಭವಿಷ್ಯದಲ್ಲಿ ನನ್ನನ್ನು ಕುಸ್ತಿ ಕಣದಲ್ಲಿ ನೋಡುವುದಿಲ್ಲ’ ಎಂದು ಹೇಳಿದ್ದರು.
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…
2023ರಿಂದ "ಮಾತೋಶ್ರೀ ಫೌಂಡೇಶನ್"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…