ನವದೆಹಲಿ: ಕುಸ್ತಿಪಟುಗಳಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕುಸ್ತಿಪಟು ಸಾಕ್ಷಿ ಮಲಿಕ್ ಅವರಿಗೆ ಭರವಸೆ ನೀಡಿದ್ದಾರೆ.
ತಮ್ಮ ಹೋರಾಟಕ್ಕೆ ನ್ಯಾಯ ಸಿಗದ ಕಾರಣ ಕುಸ್ತಿಗೆ ವಿದಾಯ ಹೇಳಿದ ಬೆನ್ನಲ್ಲೇ ಸಾಕ್ಷಿ ಮಲಿಕ್ ಅವರನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ, ತಮ್ಮ ನಿರ್ಧಾರದಿಂದ ಹಿಂದೆ ಸರಿಯುವಂತೆ ಅವರಿಗೆ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಿಯಾಂಕಾ ಗಾಂಧಿ, ‘ಕುಸ್ತಿಪಟು ಸಾಕ್ಷಿ ಮಲಿಕ್ ಅವರನ್ನು ಭೇಟಿ ಮಾಡಿದ್ದು, ಪ್ರಸಕ್ತ ಬೆಳವಣಿಗೆಯಿಂದ ಅವರು ತುಂಬಾ ನೊಂದುಕೊಂಡಿದ್ದಾರೆ. ನ್ಯಾಯ ಸಿಗುವವರೆಗೂ ಕುಸ್ತಿಗೆ ವಿದಾಯ ಹೇಳುವ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವಂತೆ ತಿಳಿಸಿದ್ದೇನೆ’ ಎಂದರು.
ದೇಶಕ್ಕೆ ಕೀರ್ತಿ ತಂದ ಮಹಿಳಾ ಕುಸ್ತಿಪಟುಗಳು ಬಿಜೆಪಿ ಸಂಸದರೊಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಆದರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಕಿಡಿಕಾರಿದರು.
ಭಾರತ ಕುಸ್ತಿ ಫೆಡರೇಷನ್ನ ಅಧ್ಯಕ್ಷರಾಗಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಕುಮಾರ್ ಸಿಂಗ್ ಅವರು ಆಯ್ಕೆಯಾಗಿದ್ದು, ಇದನ್ನು ವಿರೋಧಿಸಿ ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದ್ದರು.
‘ಬ್ರಿಜ್ ಭೂಷಣ್ ಅವರ ಆಪ್ತ ಡಬ್ಲ್ಯುಎಫ್ಐ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ, ನಾನು ಕುಸ್ತಿ ತ್ಯಜಿಸುತ್ತೇನೆ. ಇಂದಿನಿಂದ ನೀವು ಭವಿಷ್ಯದಲ್ಲಿ ನನ್ನನ್ನು ಕುಸ್ತಿ ಕಣದಲ್ಲಿ ನೋಡುವುದಿಲ್ಲ’ ಎಂದು ಹೇಳಿದ್ದರು.
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…