ರಾಷ್ಟ್ರೀಯ

ಇಂದು ದೇಶಾದ್ಯಂತ ʼINDIAʼ ಮೈತ್ರಿಕೂಟದಿಂದ ಪ್ರತಿಭಟನೆ

ನವದೆಹಲಿ: ಸಂಸತ್ ನಲ್ಲಿ ಲೋಕಸಭೆಯಲ್ಲಿ ಭದ್ರತಾ ವೈಫಲ್ಯ ಖಂಡಿಸಿ, ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಮುಗಿಬಿದ್ದಿದ್ದವು. ಇದೇ ಕಾರಣಕ್ಕಾಗಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನೂರಾರು ವಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಈ ಕ್ರಮವನ್ನು ಖಂಡಿಸಿ, ಇಂದು ದೇಶಾದ್ಯಂತ ಇಂಡಿಯಾ ಮೈತ್ರಿಕೂಟದಿಂದ ಧರಣಿ ನಡೆಸಲು ಮುಂದಾಗಿವೆ.

ಸಂಸತ್ತಿನ ಉಭಯ ಸದನಗಳ 146 ವಿಪಕ್ಷ ಸದಸ್ಯರ ಅಮಾನತು ಖಂಡಿಸಿ, ಇಂದು ದೇಶಾದ್ಯಂತ ಇಂಡಿಯಾ ಮೈತ್ರಿಕೂಟದಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ಲೋಕಸಭೆಯಲ್ಲಿನ ಭದ್ರತಾ ವೈಪಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂಬುದಾಗಿ ಉಭಯ ಸದನಗಳ ಸದಸ್ಯರು ಗದ್ದಲವನ್ನು ಲೋಕಸಭೆ, ರಾಜ್ಯಸಭೆಗಳಲ್ಲಿ ಪ್ರತಿಭಟನೆ ನಡೆಸಿದ್ದರು.

ಇದರಿಂದಾಗಿ ಲೋಕಸಭೆಯಿಂದ 100 ಹಾಗೂ ರಾಜ್ಯಸಭೆಯಿಂದ 45 ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.

ಕೇಂದ್ರ ಸರ್ಕಾರದ ಈ ನಿರ್ಧರವನ್ನು ಕಟುವಾಗಿ ಟೀಕಿಸಿರುವಂತ ವಿಪಕ್ಷಗಳ ಸದಸ್ಯರು, ಸರ್ಕಾರ ವಿವಾದಾತ್ಮಕ ಮಸೂದೆಗಳನ್ನು ಸೂಕ್ತ ಚರ್ಚೆ ನಡೆಸದೇ ಅಂಗೀಕಾರ ಪಡೆದುಕೊಳ್ಳಲು ವಿಪಕ್ಷ ಸದಸ್ಯರನ್ನು ಅಮಾನತು ತಂತ್ರ ರೂಪಿಸಿದೆ ಎಂದು ಕಿಡಿಕಾರಿದೆ.

andolanait

Recent Posts

ಇನ್ಸ್‌ಸ್ಟಾಗ್ರಾಂನಲ್ಲಿ ಬ್ಯಾಡ್‌ ಕಾಮೆಂಟ್‌ : ಸಾನ್ವಿ ಸುದೀಪ್‌ ಖಡಕ್‌ ತಿರುಗೇಟು

ಬೆಂಗಳೂರು : ನಟ ಕಿಚ್ಚ ಸುದೀಪ್‌ ಮಗಳು, ಗಾಯಕಿ ಸಾನ್ವಿ ಸುದೀಪ್‌ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…

12 mins ago

ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್‌ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್‌ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…

26 mins ago

ಹುಣಸೂರು | ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿ

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…

1 hour ago

ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…

2 hours ago

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…

2 hours ago

800 ಕಿ.ಮೀ ಪಾದಯಾತ್ರೆ ಮೂಲಕ ಅಯ್ಯಪ್ಪನ ದರ್ಶನ ಪಡೆಯುವುದಕ್ಕೆ ಹೊರಟ ಭಕ್ತರು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…

2 hours ago