ನವದೆಹಲಿ: ಆಮ್ ಆದ್ಮಿ ಪಕ್ಷವು ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ನಾಯಕನ್ನಾಗಿ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ರಾಜ್ಯಸಭಾ ಅಧ್ಯಕ್ಷರಿಗೆ ಎಎಪಿ ಮುಖ್ಯಸ್ಥರು ಪತ್ರ ಬರೆದಿದ್ದು, ಆರೋಗ್ಯ ಸಮಸ್ಯೆ ಹೊಂದಿರುವ ಸಂಜಯ್ ಸಿಂಗ್ ಅನುಪಸ್ಥಿತಿಯಲ್ಲಿ ರಾಘವ್ ಚಡ್ಡಾ ಇನ್ನು ಮುಂದೆ ಮೇಲ್ಮನೆಯಲ್ಲಿ ಪಕ್ಷದ ನಾಯಕರಾಗಲಿದ್ದಾರೆ ಎಂದು ಹೇಳಿದ್ದಾರೆ.
ಎಎಪಿ ಸಂಸದ ಸಂಜಯ್ ಸಿಂಗ್ ಸದ್ಯ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಚಡ್ಡಾ ಅವರನ್ನು ನಾಯಕನ್ನಾಗಿ ನೇಮಿಸುವ ಕುರಿತು ಎಎಪಿಯಿಂದ ಪತ್ರವನ್ನು ಸ್ವೀಕರಿಸಲಾಗಿದೆ ಎಂದು ರಾಜ್ಯಸಭಾ ಸಚಿವಾಲಯದ ಮೂಲಗಳು ಖಚಿತಪಡಿಸಿವೆ.
ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ದೊಡ್ಡ ಬಲವನ್ನು ಹೊಂದಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…