ರಾಷ್ಟ್ರೀಯ

ಭಾರತ ನ್ಯಾಯ ಯಾತ್ರೆಗೆ ಸಜ್ಜಾದ ರಾಹುಲ್‌ ಗಾಂಧಿ!

ನವದೆಹಲಿ: ದಕ್ಷಿಣ ಭಾರತದಿಂದ ಉತ್ತರ ಭಾರತದವರೆಗೆ ಭಾರತ್ ಜೋಡೊ ಯಾತ್ರೆ ಮಾಡಿ ಯಶಸ್ವಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ಬಾರಿ ಪೂರ್ವದಿಂದ ಪಶ್ಚಿಮ ಭಾರತದವರೆಗೆ ‘ಭಾರತ ನ್ಯಾಯ ಯಾತ್ರೆ’ ಮಾಡಲು ಸಜ್ಜಾಗಿದ್ದಾರೆ.

ಭಾರತ್ ಜೋಡೊ ಯಶಸ್ಸಿನ ಬಳಿಕ ದಕ್ಷಿಣ ಭಾರತದ ಎರಡು ರಾಜ್ಯಗಳಾದ ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಉಲ್ಲೇಖಾರ್ಹ.

ಜನವರಿ 14ರಂದು ಮಣಿಪುರದಿಂದ ಮಹಾರಾಷ್ಟ್ರವರೆಗಿನ 6,200 ಕಿಮೀ ದೂರದ ಭಾರತ ನ್ಯಾಯ ಯಾತ್ರೆಗೆ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಈ ಯಾತ್ರೆಯು ಲೋಕಸಭಾ ಚುನಾವಣೆಗೂ ಮುನ್ನ ಮಾರ್ಚ್ 20ರಂದು ಅಂತ್ಯಗೊಳ್ಳಲಿದೆ.

ಈ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ 14 ರಾಜ್ಯಗಳು ಹಾಗೂ 85 ಜಿಲ್ಲೆಗಳನ್ನು ಹಾದು ಹೋಗಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಮಣಿಪುರ, ನಾಗಾಲ್ಯಾಂಡ್, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್ ಹಾಗೂ ಮಹಾರಾಷ್ಟ್ರದ ಮೂಲಕ ರಾಹುಲ್ ಗಾಂಧಿ ಹಾದು ಹೋಗಲಿದ್ದಾರೆ.

ಈ ಯಾತ್ರೆಯು ಬಸ್ ಪ್ರಯಾಣದೊಂದಿಗೆ ಪಾದ ಯಾತ್ರೆಯನ್ನೂ ಒಳಗೊಂಡಿರಲಿದೆ. ಹೆಚ್ಚು ಜನರಿಗೆ ಪ್ರವೇಶ ಒದಗಿಸಲು ಈ ಬಗೆಯ ಯೋಜನೆಯನ್ನು ರೂಪಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

andolanait

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

52 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

56 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago