ಹೊಸದಿಲ್ಲಿ: ಮುಂಬರುವ ಲೋಕಸಭಾ ಚಟುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ಕೇಂದ್ರೀಯ ನಾಯಕರು ಬುಧವಾರ ಪಕ್ಷದ ಆಂಧ್ರಪ್ರದೇಶ ಘಟಕದ ನಾಯಕರೊಂದಿಗೆ ಮಾತುಕತೆ ನಡೆಸಿದರು.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ರಾಜ್ಯಮಟ್ಟದ ನಾಯಕರೊಂದಿಗೆ ಸರಣಿ ಮಾತುಕತೆಗಳನ್ನು ನಡೆಸಿದ ಬೆನ್ನಲ್ಲೇ ಈ ಸಭೆ ನಡೆದಿದೆ.
ಇಂದು ನಡೆದ ಮಾತುಕತೆಯ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು ಎಂದು ತಿಳಿಸಿದ್ದಾರೆ.
”ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಸರಕಾರ ರಚನೆಯಾದ ಬಳಿಕ ಪರಿಸ್ಥಿತಿಯಲ್ಲಿ ವ್ಯಾಪಕ ಬದಲಾವಣೆಯಾಗಿದೆಯೆಂದು ಪ್ರತಿಯೊಬ್ಬರು ಭಾವಿಸಿದ್ದಾರೆ. ಪ್ರತಿಯೋರ್ವ ನಾಯಕ ಹಾಗೂ ಕಾರ್ಯಕರ್ತ ಪಕ್ಷಕ್ಕಾಗಿ ಕಠಿಣವಾಗಿ ದುಡಿಯಲಿದ್ದಾರೆ ಹಾಗೂ ಕಾಂಗ್ರೆಸ್ ಪಕ್ಷದ ಜೊತೆ ಈ ಮೊದಲು ಆಂಧ್ರಪ್ರದೇಶದ ಜನತೆ ಹಂಚಿಕೊಂಡಿದ್ದ ಬಾಂಧವ್ಯವನ್ನು ಮರುಸ್ಥಾಪಿಸಲಿದ್ದಾರೆ ” ಎಂದು ಖರ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ಒಟ್ಟು 25 ಲೋಕಸಭಾ ಕ್ಷೇತ್ರಗಳಿದ್ದು, ಆ ಪೈಕಿ 22 ವೈಎಸ್ಆರ್ಪಿ ಪಕ್ಷದ ವಶದಲ್ಲಿವೆ. ತೆಲುಗುದೇಶಂ ಪಕ್ಷವು ಮೂರು ಸ್ಥಾನಗಳನ್ನು ಹೊಂದಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…