ರಾಷ್ಟ್ರೀಯ

ರಾಜಸ್ಥಾನ ಚುನಾವಣೆ: ಶೇ.68 ರಷ್ಟು ಶಾಂತಿಯುತ ಮತದಾನ

ಜೈಪುರ : ಲೋಕಸಭೆ ಚುನಾವಣೆ ದೃಷ್ಟಿಯಿಂದ ಹೆಚ್ಚಿನ ಗಮನ ಸೆಳೆದಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯು ಶನಿವಾರ ಮುಕ್ತಾಯಗೊಂಡಿದೆ. ರಾಜ್ಯಾದ್ಯಂತ ಶಾಂತಿಯುತವಾಗಿ ಮತದಾನ ನಡೆದಿದ್ದು, ಶೇ.68.24ರಷ್ಟು ಮತದಾನವಾಗಿದೆ. ಕಳೆದ ಚುನಾವಣೆಯಲ್ಲಿ ಶೇ.74.72 ಮತದಾನವಾಗಿತ್ತು.

ಒಟ್ಟು 200 ವಿಧಾನಸಭೆ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಒಂದು ಕ್ಷೇತ್ರದಲ್ಲಿ ಮತದಾನ ಮುಂದೂಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಗುರ್ಮೀತ್ ಸಿಂಗ್ ಕೂನರ್ ನಿಧನದ ಹಿನ್ನೆಲೆಯಲ್ಲಿ ಶ್ರೀಗಂಗಾ ನಗರ ಜಿಲ್ಲೆಯ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ರದ್ದುಗೊಳಿಸಲಾಗಿದೆ.

ಶನಿವಾರ ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಯಿತು. ಒಟ್ಟು 1,862 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ರಾಜಸ್ಥಾನದಲ್ಲಿ ಒಟ್ಟು 5,29,31,152 ಮತದಾರರಿದ್ದಾರೆ. ಈ ವರ್ಷ 18-19 ವಯೋಮಿತಿಯಲ್ಲಿ ಒಟ್ಟು 22,61,008 ಹೊಸ ಮತದಾರರು ಸೇರ್ಪಡೆಗೊಂಡಿದ್ದಾರೆ. ಅಂಚೆ ಮತ ಪತ್ರಗಳ ಮೂಲಕ ಈಗಾಗಲೇ ಕನಿಷ್ಠ ಮೂರು ಲಕ್ಷ ಮತಗಳು ಚಲಾವಣೆಯಾಗಿವೆ.

ರಾಜ್ಯಾದ್ಯಂತ ಒಟ್ಟು 51,890 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಕನಿಷ್ಠ 26,000 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಸೌಲಭ್ಯವಿದೆ. ಸೂಕ್ಷ್ಮ ಮತಗಟ್ಟೆಗಳು 12,500, 2,74,000 ಸರ್ಕಾರಿ ಸಿಬ್ಬಂದಿಗಳು, 1,71,000 ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮತಗಟ್ಟೆಗಳಿಗೆ ವೆಬ್‌ಕಾಸ್ಟಿಂಗ್, ಮೈಕ್ರೋ ಅಬ್ಸರ್ವರ್‌ಗಳು ಮತ್ತು ವಿಡಿಯೋಗ್ರಫಿ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಪ್ರವೀಣ್ ಗುಪ್ತಾ ತಿಳಿಸಿದ್ದಾರೆ.

ಇಂದು ಶಾಂತಿಯುತ ಮತದಾನ ನಡೆದಿದ್ದು, ಪ್ರಮುಖ ನಾಯಕರಾದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ಬಿಜೆಪಿಯ ಮಾಜಿ ಸಿಎಂ ವಸುಂಧರಾ ರಾಜೇ, ಮಾಜಿ ಸಿಎಂ ಸಚಿನ್‌ ಪೈಲಟ್‌ ಇತರ ನಾಯಕರ ಭವಿಷ್ಯ ಏನೆಂದು ತಿಳಿಯಲಿದ್ದು, ಡಿಸೆಂಬರ್‌ ೩ ರಂದು ಮತದಾನ ಪ್ರಭು ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

andolanait

Recent Posts

ನಾಳೆ ಸಾರಿಗೆ ಮುಷ್ಕರ : ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ…

19 mins ago

ವಿಧಾನಸೌಧದಲ್ಲಿ ಮಾಧ್ಯಮಕ್ಕೆ ಇನ್ನಷ್ಟು ನಿರ್ಬಂಧ

ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…

45 mins ago

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…

2 hours ago

ಮೈಸೂರು | ಸ್ವಚ್ಛ ಸರ್ವೇಕ್ಷಣೆ ; ಜಾಥಾ ನಡೆಸಿ ಜನರಿಗೆ ಜಾಗೃತಿ

ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…

2 hours ago

ಜ್ಞಾನದ ಜೊತೆ ಕೌಶಲವೂ ಮುಖ್ಯ : ಪರೀಕ್ಷಾಂಗ ಕುಲಸಚಿವ ನಾಗರಾಜು ಅಭಿಮತ

ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…

2 hours ago

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

4 hours ago