ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್ಕೌಂಟರ್ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದು, ಒಬ್ಬ ಯೋಧ ಗಾಯಗೊಂಡಿದ್ದಾರೆ.
ಎನ್ಕೌಂಟರ್ನಲ್ಲಿ ಮೈಸೂರು ಮೂಲದ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಾವನ್ನಪ್ಪಿದ್ದಾರೆ. ಪ್ರಜ್ವಲ್ ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಎಂಡಿ ಆಗಿದ್ದ ವೆಂಕಟೇಶ್ ಅವರ ಏಕೈಕ ಪುತ್ರರಾಗಿದ್ದರು. ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ ಸೇನೆ ಸೇರಿದ್ದರು. ಸೇನೆಯಲ್ಲಿ 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು ಎಂದು ತಿಳಿಸಲಾಗಿದೆ.
ಉಳಿದಂತೆ ಗಾಯಗೊಂಡ ಯೋಧನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧರ್ಮಸಾಲ್ನ ಬಾಜಿಮಲ್ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎನ್ಕೌಂಟರ್ ಪ್ರಾರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದಕರ ಪತ್ತೆಗಾಗಿ ಭಾನುವಾರದಿಂದ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಭದ್ರತಾ ಪಡೆಗಳು ಸ್ಥಳದಲ್ಲೇ ಇಬ್ಬರು ಭಯೋತ್ಪಾದಕರನ್ನು ಸುತ್ತುವರಿದಿದ್ದು, ಭೀಕರ ಎನ್ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರನ್ನು ಹತ್ಯೆಗೈಯಲು ಹೆಚ್ಚಿನ ಸೈನಿಕರನ್ನು ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…