ರಾಷ್ಟ್ರೀಯ

ರಜೌರಿ ಎನ್​ಕೌಂಟರ್​: ಮೈಸೂರು ಮೂಲದ ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದು, ಒಬ್ಬ ಯೋಧ ಗಾಯಗೊಂಡಿದ್ದಾರೆ.

ಎನ್‌ಕೌಂಟರ್‌ನಲ್ಲಿ ಮೈಸೂರು ಮೂಲದ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಾವನ್ನಪ್ಪಿದ್ದಾರೆ. ಪ್ರಜ್ವಲ್‌ ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಎಂಡಿ ಆಗಿದ್ದ ವೆಂಕಟೇಶ್ ಅವರ ಏಕೈಕ ಪುತ್ರರಾಗಿದ್ದರು. ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ ಸೇನೆ ಸೇರಿದ್ದರು. ಸೇನೆಯಲ್ಲಿ 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು ಎಂದು ತಿಳಿಸಲಾಗಿದೆ.
ಉಳಿದಂತೆ ಗಾಯಗೊಂಡ ಯೋಧನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧರ್ಮಸಾಲ್‌ನ ಬಾಜಿಮಲ್ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದಕರ ಪತ್ತೆಗಾಗಿ ಭಾನುವಾರದಿಂದ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಭದ್ರತಾ ಪಡೆಗಳು ಸ್ಥಳದಲ್ಲೇ ಇಬ್ಬರು ಭಯೋತ್ಪಾದಕರನ್ನು ಸುತ್ತುವರಿದಿದ್ದು, ಭೀಕರ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರನ್ನು ಹತ್ಯೆಗೈಯಲು ಹೆಚ್ಚಿನ ಸೈನಿಕರನ್ನು ಕಳುಹಿಸಲಾಗಿದೆ ಎಂದು ಅವರು ಹೇಳಿದರು.

andolanait

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

44 mins ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

48 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

54 mins ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

1 hour ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

1 hour ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

1 hour ago