ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಮ್ಮ ನೆನಪಿನಲ್ಲಿ ಉಳಿಯಲಿದೆ: ಪಿಎಂ ಮೋದಿಅಯೋಧ್ಯೆಯಲ್ಲಿ ನಿನ್ನೆ(ಸೋಮವಾರ) ನಡೆದ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸಮಾರಂಭದ ವಿಡಿಯೋ ಹಂಚಿಕೊಂಡಿರುವ ಪ್ರಧಾನಿ, ಜನವರಿ 22 ರಂದು ನಾವು ನಿನ್ನೆ ಅಯೋಧ್ಯೆಯಲ್ಲಿ ನೋಡಿದ್ದು ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಬರೆದುಕೊಂಡಿದ್ದಾರೆ.
ಮೂರು ನಿಮಿಷಗಳ ವೀಡಿಯೊದಲ್ಲಿ, ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿ ಛತ್ರಿ ಹಿಡಿದುಕೊಂಡು ಪ್ರಧಾನಿ ದೇವಾಲಯದ ಗರ್ಭಗುಡಿಗೆ ಕಾಲಿಡುತ್ತಿರುವುದನ್ನು ಕಾಣಬಹುದು. ನೂತನವಾಗಿ ನಿರ್ಮಿಸಲಾದ ದೇವಾಲಯದಲ್ಲಿ ಪ್ರಧಾನಿ ಮೋದಿಯವರು ಸಮಾರಂಭದಲ್ಲಿ ಪಾಲ್ಗೊಂಡು ರಾಮಲಲ್ಲಾರಿಂದ ಆಶೀರ್ವಾದ ಪಡೆಯುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.