ರಾಷ್ಟ್ರೀಯ

ಒಂದು ರಾಷ್ಟ್ರ ಒಂದು ಚುನಾವಣೆ: ಸಾರ್ವಜನಿಕರ ಸಲಹೆ ಕೋರಿದ ಕೋವಿಂದ್‌ ನೇತೃತ್ವದ ಸಮಿತಿ

ಒಂದು ರಾಷ್ಟ್ರ ಒಂದು ಚುನಾವಣೆ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿಯನ್ನು ಕಳೆದ ಸೆಪ್ಟೆಂಬರ್‌ನಲ್ಲಿ ರಚಿಸಲಾಗಿತ್ತು. ಈ ಸಮಿತಿ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ರಾಜಕೀಯ ಪಕ್ಷಗಳ ಅಭಿಪ್ರಾಯವೇನು ಎಂಬುದನ್ನು ವಿವಿಧ ರಾಜಕೀಯ ಪಕ್ಷಗಳಿಗೆ ಪತ್ರ ಬರೆಯುವ ಮೂಲಕ ಸಂಗ್ರಹ ಮಾಡಿತ್ತು.

ಇದೀಗ ಅದೇ ರೀತಿ ಈ ಕುರಿತು ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹ ಮಾಡಲು ಸಮಿತಿ ಮುಂದಾಗಿದೆ. ಈ ಕುರಿತು ಇದೀಗ ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸುವ ಮೂಲಕ ಸಾರ್ವಜನಿಕ ಸಲಹೆಗಳನ್ನು ಆಹ್ವಾನಿಸಿದೆ. ಜನವರಿ 15ರೊಳಗೆ ಸಾರ್ವಜನಿಕರು ಸಲಹೆಗಳನ್ನು ಕಳುಹಿಸಬೇಕು, ಅಂತಹ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ. ಸಾರ್ವಜನಿಕರು ತಮ್ಮ ಸಲಹೆಗಳನ್ನು onee.gov.in ವೆಬ್‌ಸೈಟ್‌ನಲ್ಲಿ ಪೋಸ್ಟ್‌ ಮಾಡಬಹುದು ಅಥವಾ sc-hlc@gov.inಗೆ ಇಮೇಲ್ ಕಳುಹಿಸಿಕೊಡಬಹುದು ಎಂದು ನೋಟಿಸ್‌ನಲ್ಲಿ ತಿಳಿಸಿದೆ.

andolana

Recent Posts

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

4 mins ago

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

24 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

24 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

24 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

24 hours ago