ರಾಷ್ಟ್ರೀಯ

ರಾಮ ಮಾಂಸಾಹಾರಿಯಾಗಿದ್ದ: ವಿವಾದದ ಬಳಿಕ ಕ್ಷಮೆ ಕೋರಿದ ಜಿತೇಂದ್ರ ಅವ್ಹಾದ್

ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಹಾಗೂ ಮಾಜಿ ಸಚಿವ ಜಿತೇಂದ್ರ ಅವ್ಹಾದ್ ಅವರು ʼಶ್ರೀ ರಾಮ ಮಾಂಸಾಹಾರಿಯಾಗಿದ್ದʼ ಎಂಬ ಹೇಳಿಕೆ ಮೂಲಕ ಬುಧವಾರ ವಿವಾದ ಸೃಷ್ಟಿಸಿದ್ದಾರೆ. ತಮ್ಮ ಹೇಳಿಕೆಗೆ ಅವರು ಗುರುವಾರ ಕ್ಷಮೆ ಕೋರಿದ್ದಾರೆ.

ಆದರೆ ತಾವು ಯಾವುದನ್ನೂ ಸಂಶೋಧನೆ ಮಾಡದೆ ಹೇಳುವುದಿಲ್ಲ ಎಂದಿರುವ ಅವರು, ಹಿಂದೂ ಮಹಾ ಪುರಾಣ ರಾಮಾಯಣವು ಹೇಳಿರುವುದನ್ನು ಉಲ್ಲೇಖಿಸಿದೆ ಎಂದಿದ್ದಾರೆ.

ಮಹಾರಾಷ್ಟ್ರದ ಶಿರಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶರದ್ ಪವಾರ್ ಬಣದ ನಾಯಕ ಜಿತೇಂದ್ರ ಅವ್ಹಾದ್, “ರಾಮ ನಮ್ಮವನು. ಆತ ಬಹುಜನ ಸಮುದಾಯದವನು. ರಾಮ ಬೇಟೆಯಾಡಿ ಊಟ ಮಾಡುತ್ತಿದ್ದ. ನಾವು ಸಸ್ಯಾಹಾರಿಗಳಾಗಬೇಕು ಎಂದು ನೀವು ಬಯಸುತ್ತಿದ್ದೀರಿ. ಆದರೆ ನಾವು ಆತನನ್ನು ನಮ್ಮ ಆದರ್ಶ ಎಂದು ಪರಿಗಣಿಸಿ ಮಟನ್ ಸೇವಿಸುತ್ತೇವೆ. ರಾಮ ಸಸ್ಯಾಹಾರಿಯಾಗಿರಲಿಲ್ಲ, ಆತ ಮಾಂಸಾಹಾರಿಯಾಗಿದ್ದ” ಎಂದು ಹೇಳಿದ್ದರು.

ರಾಮನ ವನವಾಸದ ಅವಧಿಯನ್ನು ಉಲ್ಲೇಖಿಸಿದ್ದ ಅವರು, “14 ವರ್ಷ ಕಾಡಿನಲ್ಲಿ ಕಳೆದ ವ್ಯಕ್ತಿಯು ಸಸ್ಯಾಹಾರವನ್ನು ಎಲ್ಲಿಂದ ಪಡೆಯಲು ಸಾಧ್ಯ?” ಎಂದು ಪ್ರಶ್ನಿಸಿದ್ದರು.

ಭಾರತವನ್ನು ಸಸ್ಯಾಹಾರಿ ದೇಶವನ್ನಾಗಿ ಮಾಡುವ ಪ್ರಯತ್ನ ನಡೆದಿದೆ. ಆದರೆ ದೇಶದ ಶೇ 80ರಷ್ಟು ಜನಸಂಖ್ಯೆ ಈಗಲೂ ಮಾಂಸಾಹಾರಿಗಳಾಗಿದ್ದಾರೆ ಮತ್ತು ಅವರು ಶ್ರೀ ರಾಮನ ಭಕ್ತರೂ ಹೌದು” ಎಂದಿದ್ದರು.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಕೆಲವು ದಿನಗಳ ಮುಂಚೆ ಅವರು ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ. ಅವ್ಹಾದ್ ಅವರನ್ನು ಟೀಕಿಸಿರುವ ಬಿಜೆಪಿ, ಶ್ರೀ ರಾಮನ ವಿರುದ್ಧ ‘ಆಕ್ಷೇಪಾರ್ಹ ಹೇಳಿಕೆ’ ನೀಡಿದ ಆರೋಪದಡಿ ಅವರ ವಿರುದ್ಧ ದೂರು ನೀಡಿದೆ.

ನೋವಾಗಿದ್ದರೆ ಕ್ಷಮೆ ಕೋರುವೆ
ಗುರುವಾರ ಪ್ರತಿಕ್ರಿಯೆ ನೀಡಿರುವ ಅವ್ಹಾದ್, “ನಾನು ಯಾವುದನ್ನೂ ಸಂಶೋಧನೆ ಮಾಡದೆ ಮಾತನಾಡುವುದಿಲ್ಲ. ನಾನು ತೀವ್ರಗೊಳಿಸಲು ಬಯಸುವುದಿಲ್ಲ. ಆದರೆ ನಾನು ಹೇಳಿದ್ದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ” ಎಂದಿದ್ದಾರೆ.

“ನಾನು ಭಾಷಣ ಮಾಡಿದ ಹಲವಾರು ಸಂದರ್ಭಗಳಿವೆ. ನನ್ನ ಭಾಷಣದಲ್ಲಿ ನಾನು ಯಾವುದನ್ನೂ ತಿರುಚಿಲ್ಲ. ನಾನು ಈ ವಿಚಾರವನ್ನು ಮತ್ತಷ್ಟು ಬೆಳೆಯಲು ಬಯಸುವುದಿಲ್ಲ. ಆದರೆ ವಾಲ್ಮೀಕಿ ರಾಮಾಯಣದಲ್ಲಿ, ಅನೇಕ ಕಾಂಡಗಳಿವೆ. ಅಯೋಧ್ಯಾ ಕಾಂಡದ 102ನೇ ಶ್ಲೋಕದಲ್ಲಿ ಅದನ್ನು ಉಲ್ಲೇಖಿಸಲಾಗಿದೆ” ಎಂದು ಹೇಳಿದ್ದಾರೆ.

ತರ್ಕಬದ್ಧವಾಗಿ ಮಾತನಾಡಲು ಸಾಧ್ಯವಾಗದವರು ನನ್ನ ವಿರುದ್ಧದ ಪ್ರಕರಣಗಳ ಬಗ್ಗೆ ಮಾತನಾಡುತ್ತಾರೆ. ಆದರೆ ‘ರಾಮ್ ರಾಮ್’ ಎಂದು ಪಠಿಸುವವರಿಗೆ ನಾನು ಹೇಳಲು ಬಯಸುವುದು, ರಾಮ ನಮ್ಮ ಹೃದಯಗಳಲ್ಲಿ ವಾಸಿಸುತ್ತಿದ್ದಾನೆ ಎಂದು” ಎಂದಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago