ರಾಷ್ಟ್ರೀಯ

ರಾಮ ಮಾಂಸಾಹಾರಿಯಾಗಿದ್ದ: ವಿವಾದದ ಬಳಿಕ ಕ್ಷಮೆ ಕೋರಿದ ಜಿತೇಂದ್ರ ಅವ್ಹಾದ್

ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಹಾಗೂ ಮಾಜಿ ಸಚಿವ ಜಿತೇಂದ್ರ ಅವ್ಹಾದ್ ಅವರು ʼಶ್ರೀ ರಾಮ ಮಾಂಸಾಹಾರಿಯಾಗಿದ್ದʼ ಎಂಬ ಹೇಳಿಕೆ ಮೂಲಕ ಬುಧವಾರ ವಿವಾದ ಸೃಷ್ಟಿಸಿದ್ದಾರೆ. ತಮ್ಮ ಹೇಳಿಕೆಗೆ ಅವರು ಗುರುವಾರ ಕ್ಷಮೆ ಕೋರಿದ್ದಾರೆ.

ಆದರೆ ತಾವು ಯಾವುದನ್ನೂ ಸಂಶೋಧನೆ ಮಾಡದೆ ಹೇಳುವುದಿಲ್ಲ ಎಂದಿರುವ ಅವರು, ಹಿಂದೂ ಮಹಾ ಪುರಾಣ ರಾಮಾಯಣವು ಹೇಳಿರುವುದನ್ನು ಉಲ್ಲೇಖಿಸಿದೆ ಎಂದಿದ್ದಾರೆ.

ಮಹಾರಾಷ್ಟ್ರದ ಶಿರಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶರದ್ ಪವಾರ್ ಬಣದ ನಾಯಕ ಜಿತೇಂದ್ರ ಅವ್ಹಾದ್, “ರಾಮ ನಮ್ಮವನು. ಆತ ಬಹುಜನ ಸಮುದಾಯದವನು. ರಾಮ ಬೇಟೆಯಾಡಿ ಊಟ ಮಾಡುತ್ತಿದ್ದ. ನಾವು ಸಸ್ಯಾಹಾರಿಗಳಾಗಬೇಕು ಎಂದು ನೀವು ಬಯಸುತ್ತಿದ್ದೀರಿ. ಆದರೆ ನಾವು ಆತನನ್ನು ನಮ್ಮ ಆದರ್ಶ ಎಂದು ಪರಿಗಣಿಸಿ ಮಟನ್ ಸೇವಿಸುತ್ತೇವೆ. ರಾಮ ಸಸ್ಯಾಹಾರಿಯಾಗಿರಲಿಲ್ಲ, ಆತ ಮಾಂಸಾಹಾರಿಯಾಗಿದ್ದ” ಎಂದು ಹೇಳಿದ್ದರು.

ರಾಮನ ವನವಾಸದ ಅವಧಿಯನ್ನು ಉಲ್ಲೇಖಿಸಿದ್ದ ಅವರು, “14 ವರ್ಷ ಕಾಡಿನಲ್ಲಿ ಕಳೆದ ವ್ಯಕ್ತಿಯು ಸಸ್ಯಾಹಾರವನ್ನು ಎಲ್ಲಿಂದ ಪಡೆಯಲು ಸಾಧ್ಯ?” ಎಂದು ಪ್ರಶ್ನಿಸಿದ್ದರು.

ಭಾರತವನ್ನು ಸಸ್ಯಾಹಾರಿ ದೇಶವನ್ನಾಗಿ ಮಾಡುವ ಪ್ರಯತ್ನ ನಡೆದಿದೆ. ಆದರೆ ದೇಶದ ಶೇ 80ರಷ್ಟು ಜನಸಂಖ್ಯೆ ಈಗಲೂ ಮಾಂಸಾಹಾರಿಗಳಾಗಿದ್ದಾರೆ ಮತ್ತು ಅವರು ಶ್ರೀ ರಾಮನ ಭಕ್ತರೂ ಹೌದು” ಎಂದಿದ್ದರು.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಕೆಲವು ದಿನಗಳ ಮುಂಚೆ ಅವರು ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ. ಅವ್ಹಾದ್ ಅವರನ್ನು ಟೀಕಿಸಿರುವ ಬಿಜೆಪಿ, ಶ್ರೀ ರಾಮನ ವಿರುದ್ಧ ‘ಆಕ್ಷೇಪಾರ್ಹ ಹೇಳಿಕೆ’ ನೀಡಿದ ಆರೋಪದಡಿ ಅವರ ವಿರುದ್ಧ ದೂರು ನೀಡಿದೆ.

ನೋವಾಗಿದ್ದರೆ ಕ್ಷಮೆ ಕೋರುವೆ
ಗುರುವಾರ ಪ್ರತಿಕ್ರಿಯೆ ನೀಡಿರುವ ಅವ್ಹಾದ್, “ನಾನು ಯಾವುದನ್ನೂ ಸಂಶೋಧನೆ ಮಾಡದೆ ಮಾತನಾಡುವುದಿಲ್ಲ. ನಾನು ತೀವ್ರಗೊಳಿಸಲು ಬಯಸುವುದಿಲ್ಲ. ಆದರೆ ನಾನು ಹೇಳಿದ್ದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ” ಎಂದಿದ್ದಾರೆ.

“ನಾನು ಭಾಷಣ ಮಾಡಿದ ಹಲವಾರು ಸಂದರ್ಭಗಳಿವೆ. ನನ್ನ ಭಾಷಣದಲ್ಲಿ ನಾನು ಯಾವುದನ್ನೂ ತಿರುಚಿಲ್ಲ. ನಾನು ಈ ವಿಚಾರವನ್ನು ಮತ್ತಷ್ಟು ಬೆಳೆಯಲು ಬಯಸುವುದಿಲ್ಲ. ಆದರೆ ವಾಲ್ಮೀಕಿ ರಾಮಾಯಣದಲ್ಲಿ, ಅನೇಕ ಕಾಂಡಗಳಿವೆ. ಅಯೋಧ್ಯಾ ಕಾಂಡದ 102ನೇ ಶ್ಲೋಕದಲ್ಲಿ ಅದನ್ನು ಉಲ್ಲೇಖಿಸಲಾಗಿದೆ” ಎಂದು ಹೇಳಿದ್ದಾರೆ.

ತರ್ಕಬದ್ಧವಾಗಿ ಮಾತನಾಡಲು ಸಾಧ್ಯವಾಗದವರು ನನ್ನ ವಿರುದ್ಧದ ಪ್ರಕರಣಗಳ ಬಗ್ಗೆ ಮಾತನಾಡುತ್ತಾರೆ. ಆದರೆ ‘ರಾಮ್ ರಾಮ್’ ಎಂದು ಪಠಿಸುವವರಿಗೆ ನಾನು ಹೇಳಲು ಬಯಸುವುದು, ರಾಮ ನಮ್ಮ ಹೃದಯಗಳಲ್ಲಿ ವಾಸಿಸುತ್ತಿದ್ದಾನೆ ಎಂದು” ಎಂದಿದ್ದಾರೆ.

andolanait

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

3 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

3 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

3 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

3 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

3 hours ago