ರಾಷ್ಟ್ರೀಯ

ರಾಮ ಮಾಂಸಾಹಾರಿಯಾಗಿದ್ದ: ವಿವಾದದ ಬಳಿಕ ಕ್ಷಮೆ ಕೋರಿದ ಜಿತೇಂದ್ರ ಅವ್ಹಾದ್

ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಹಾಗೂ ಮಾಜಿ ಸಚಿವ ಜಿತೇಂದ್ರ ಅವ್ಹಾದ್ ಅವರು ʼಶ್ರೀ ರಾಮ ಮಾಂಸಾಹಾರಿಯಾಗಿದ್ದʼ ಎಂಬ ಹೇಳಿಕೆ ಮೂಲಕ ಬುಧವಾರ ವಿವಾದ ಸೃಷ್ಟಿಸಿದ್ದಾರೆ. ತಮ್ಮ ಹೇಳಿಕೆಗೆ ಅವರು ಗುರುವಾರ ಕ್ಷಮೆ ಕೋರಿದ್ದಾರೆ.

ಆದರೆ ತಾವು ಯಾವುದನ್ನೂ ಸಂಶೋಧನೆ ಮಾಡದೆ ಹೇಳುವುದಿಲ್ಲ ಎಂದಿರುವ ಅವರು, ಹಿಂದೂ ಮಹಾ ಪುರಾಣ ರಾಮಾಯಣವು ಹೇಳಿರುವುದನ್ನು ಉಲ್ಲೇಖಿಸಿದೆ ಎಂದಿದ್ದಾರೆ.

ಮಹಾರಾಷ್ಟ್ರದ ಶಿರಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶರದ್ ಪವಾರ್ ಬಣದ ನಾಯಕ ಜಿತೇಂದ್ರ ಅವ್ಹಾದ್, “ರಾಮ ನಮ್ಮವನು. ಆತ ಬಹುಜನ ಸಮುದಾಯದವನು. ರಾಮ ಬೇಟೆಯಾಡಿ ಊಟ ಮಾಡುತ್ತಿದ್ದ. ನಾವು ಸಸ್ಯಾಹಾರಿಗಳಾಗಬೇಕು ಎಂದು ನೀವು ಬಯಸುತ್ತಿದ್ದೀರಿ. ಆದರೆ ನಾವು ಆತನನ್ನು ನಮ್ಮ ಆದರ್ಶ ಎಂದು ಪರಿಗಣಿಸಿ ಮಟನ್ ಸೇವಿಸುತ್ತೇವೆ. ರಾಮ ಸಸ್ಯಾಹಾರಿಯಾಗಿರಲಿಲ್ಲ, ಆತ ಮಾಂಸಾಹಾರಿಯಾಗಿದ್ದ” ಎಂದು ಹೇಳಿದ್ದರು.

ರಾಮನ ವನವಾಸದ ಅವಧಿಯನ್ನು ಉಲ್ಲೇಖಿಸಿದ್ದ ಅವರು, “14 ವರ್ಷ ಕಾಡಿನಲ್ಲಿ ಕಳೆದ ವ್ಯಕ್ತಿಯು ಸಸ್ಯಾಹಾರವನ್ನು ಎಲ್ಲಿಂದ ಪಡೆಯಲು ಸಾಧ್ಯ?” ಎಂದು ಪ್ರಶ್ನಿಸಿದ್ದರು.

ಭಾರತವನ್ನು ಸಸ್ಯಾಹಾರಿ ದೇಶವನ್ನಾಗಿ ಮಾಡುವ ಪ್ರಯತ್ನ ನಡೆದಿದೆ. ಆದರೆ ದೇಶದ ಶೇ 80ರಷ್ಟು ಜನಸಂಖ್ಯೆ ಈಗಲೂ ಮಾಂಸಾಹಾರಿಗಳಾಗಿದ್ದಾರೆ ಮತ್ತು ಅವರು ಶ್ರೀ ರಾಮನ ಭಕ್ತರೂ ಹೌದು” ಎಂದಿದ್ದರು.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಕೆಲವು ದಿನಗಳ ಮುಂಚೆ ಅವರು ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ. ಅವ್ಹಾದ್ ಅವರನ್ನು ಟೀಕಿಸಿರುವ ಬಿಜೆಪಿ, ಶ್ರೀ ರಾಮನ ವಿರುದ್ಧ ‘ಆಕ್ಷೇಪಾರ್ಹ ಹೇಳಿಕೆ’ ನೀಡಿದ ಆರೋಪದಡಿ ಅವರ ವಿರುದ್ಧ ದೂರು ನೀಡಿದೆ.

ನೋವಾಗಿದ್ದರೆ ಕ್ಷಮೆ ಕೋರುವೆ
ಗುರುವಾರ ಪ್ರತಿಕ್ರಿಯೆ ನೀಡಿರುವ ಅವ್ಹಾದ್, “ನಾನು ಯಾವುದನ್ನೂ ಸಂಶೋಧನೆ ಮಾಡದೆ ಮಾತನಾಡುವುದಿಲ್ಲ. ನಾನು ತೀವ್ರಗೊಳಿಸಲು ಬಯಸುವುದಿಲ್ಲ. ಆದರೆ ನಾನು ಹೇಳಿದ್ದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ” ಎಂದಿದ್ದಾರೆ.

“ನಾನು ಭಾಷಣ ಮಾಡಿದ ಹಲವಾರು ಸಂದರ್ಭಗಳಿವೆ. ನನ್ನ ಭಾಷಣದಲ್ಲಿ ನಾನು ಯಾವುದನ್ನೂ ತಿರುಚಿಲ್ಲ. ನಾನು ಈ ವಿಚಾರವನ್ನು ಮತ್ತಷ್ಟು ಬೆಳೆಯಲು ಬಯಸುವುದಿಲ್ಲ. ಆದರೆ ವಾಲ್ಮೀಕಿ ರಾಮಾಯಣದಲ್ಲಿ, ಅನೇಕ ಕಾಂಡಗಳಿವೆ. ಅಯೋಧ್ಯಾ ಕಾಂಡದ 102ನೇ ಶ್ಲೋಕದಲ್ಲಿ ಅದನ್ನು ಉಲ್ಲೇಖಿಸಲಾಗಿದೆ” ಎಂದು ಹೇಳಿದ್ದಾರೆ.

ತರ್ಕಬದ್ಧವಾಗಿ ಮಾತನಾಡಲು ಸಾಧ್ಯವಾಗದವರು ನನ್ನ ವಿರುದ್ಧದ ಪ್ರಕರಣಗಳ ಬಗ್ಗೆ ಮಾತನಾಡುತ್ತಾರೆ. ಆದರೆ ‘ರಾಮ್ ರಾಮ್’ ಎಂದು ಪಠಿಸುವವರಿಗೆ ನಾನು ಹೇಳಲು ಬಯಸುವುದು, ರಾಮ ನಮ್ಮ ಹೃದಯಗಳಲ್ಲಿ ವಾಸಿಸುತ್ತಿದ್ದಾನೆ ಎಂದು” ಎಂದಿದ್ದಾರೆ.

andolanait

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

4 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

5 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

6 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

10 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

11 hours ago