ರಾಷ್ಟ್ರೀಯ

ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ರಾಮ್‌ದೇವ್‌-ಬಾಲಕೃಷ್ಣ : ನ್ಯಾಯಾಧೀಶರ ತರಾಟೆ !

ನವದೆಹಲಿ: ಸುಳ್ಳು ಜಾಹೀರಾತುಗಳನ್ನು ಪ್ರಸಾರ ಮಾಡುವ ಮೂಲಕ ಆಯುರ್ವೇದ ಉತ್ಪನ್ನಗಳನ್ನು ಉತ್ತೇಜಿಸಲು  ಪ್ರಯತ್ನ ಮಾಡಿದ ಪ್ರಕರಣದಲ್ಲಿ ಕೋರ್ಟ್ ಆದೇಶ ಉಲ್ಲಂಘಿಸಿದ ಪತಂಜಲಿ ಸಂಸ್ಥೆಯ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ  ಮತ್ತು ಯೋಗ ಗುರು ಬಾಬಾ ರಾಮದೇವ್ ಅವರು ಕೋರಿದ ಕ್ಷಮೆಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಭಾರತೀಯ ವೈದ್ಯಕೀಯ ಸಂಸ್ಥೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾ. ಹಿಮಕೊಹ್ಲಿ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದ್ದು, ಮಂಗಳವಾರವಾದ ಇಂದು ಕೋರ್ಟ್ ಮುಂದೆ ಹಾಜರಾಗಿದ್ದ ಆಚಾರ್ಯ ಬಾಲಕೃಷ್ಣ ಮತ್ತು ಯೋಗ ಗುರು ಬಾಬಾ ರಾಮದೇವ್  ವಿರುದ್ಧ ತೀವ್ರ ಅಸಮಧಾನ ಹೊರ ಹಾಕಿದೆ.

ಕಳೆದ ನವೆಂಬರ್‌ನಲ್ಲಿ ಪತಂಜಲಿ ಸಂಸ್ಥೆ ಪರ ವಕೀಲರು ನ್ಯಾಯಾಲಯದ ಮುಂದೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ತಡೆಯುವುದಾಗಿ ಭರವಸೆ ನೀಡಿದ ಹೊರತಾಗಿಯೂ ಪತಂಜಲಿ ಸಂಸ್ಥೆ ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡಿತ್ತು. ಈ ಹಿನ್ನಲೆ ಕೋರ್ಟ್ ಫೆಬ್ರವರಿ 27 ರಂದು ಪತಂಜಲಿ ಸಂಸ್ಥೆ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕರಾದ ಆಚಾರ್ಯ ಬಾಲಕೃಷ್ಣ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಿತ್ತು, ಖುದ್ದು ಹಾಜರಾಗಲು ಸೂಚಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಿಸಲು ನೋಟಿಸ್ ನೀಡಿದ್ದರೂ ನಿರ್ಲಕ್ಷಿಸಿದ್ದ ಈ ಇಬ್ಬರೂ ಕೋರ್ಟ್ ಮುಂದೆ ಖುದ್ದು ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ತಾಕೀತು ಮಾಡಿತ್ತು.

ಮಂಗಳವಾರ (ಏಪ್ರಿಲ್‌ 2) ಕೋರ್ಟ್ ಮುಂದೆ ಹಾಜರಾದ ಆಚಾರ್ಯ ಬಾಲಕೃಷ್ಣ ಮತ್ತು ಬಾಬಾ ರಾಮದೇವ್ ಬೇಷರತ್ ಕ್ಷಮೆ ಕೋರಿ ಅಫಿಡವಿಟ್ ಸಲ್ಲಿಸಿದರು. ಅಫಿಡೆವಿಟ್ ನಲ್ಲಿ ಜಾಹೀರಾತು ಪ್ರಸಾರಕ್ಕೆ ತಡೆ ನೀಡುವ ಆದೇಶ ನಮ್ಮ ಮಾಧ್ಯಮ ವಿಭಾಗಕ್ಕೆ ತಿಳಿದಿರಲಿಲ್ಲ ಹೀಗಾಗೀ ತಪ್ಪಾಗಿದೆ ಎಂದು ಆಚಾರ್ಯ ಬಾಲಕೃಷ್ಣ ಕ್ಷಮೆ ಕೇಳಿದ್ದರು, ಆದರೆ ಈ ಕಾರಣವನ್ನು ಕೋರ್ಟ್ ನಿರಾಕರಿಸಿತು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಈ ವಿಷಯದಲ್ಲಿ ʻಅಜ್ಞಾನವನ್ನು ತೋರಿಸಲುʼ ಸಾಧ್ಯವಿಲ್ಲ ಮತ್ತು ಮಾಧ್ಯಮ ವಿಭಾಗವನ್ನು ʻಸ್ವತಂತ್ರ ದ್ವೀಪʼ ಎಂದು ಪರಿಗಣಿಸಲಾಗುವುದಿಲ್ಲ. ಒಮ್ಮೆ ನ್ಯಾಯಾಲಯಕ್ಕೆ ಭರವಸೆ ನೀಡಿದರೆ ನಂತರ ಅದನ್ನು ಸಂಪೂರ್ಣವಾಗಿ ಪಾಲಿಸಬೇಕು. ಕೆಳ ಹಂತಕ್ಕೆ ನಿರ್ದೇಶಿಸುವುದು ಯಾರ ಕರ್ತವ್ಯ? ಎಂದು ನ್ಯಾಯಮೂರ್ತಿ ‌ಹಿಮ ಕೊಹ್ಲಿ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಚಾರ್ಯ ಬಾಲಕೃಷ್ಣ ಪರ ವಕೀಲರು ಇದರಲ್ಲಿ ಲೋಪವಾಗಿದೆ ಎಂದು ಒಪ್ಪಿಕೊಂಡರು, ಅದಕ್ಕಾಗಿ ವಿಷಾದ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ನ್ಯಾ. ಹಿಮ ಕೊಹ್ಲಿ, ನಿಮ್ಮ ಪಶ್ಚಾತ್ತಾಪವು ನ್ಯಾಯಾಲಯಕ್ಕೆ ಸಾಕಾಗದೇ ಇರಬಹುದು. ಈಗ ನೀವು ಕ್ಷಮಿಸಿ ಎಂದು ಹೇಳಿದ್ದಕ್ಕೆ, ನಾವು ಕ್ಷಮಿಸಿದ್ದೇವೆ ಅಂತ ಹೇಳಬಹುದು. ಅಂತಹ ವಿವರಣೆಯನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ, ನಿಮ್ಮ ಮಾಧ್ಯಮ ವಿಭಾಗವು ಸ್ವತಂತ್ರ ಇಲಾಖೆಯಲ್ಲ, ಅಲ್ಲವೇ? ನ್ಯಾಯಾಲಯದ ವಿಚಾರಣೆಯಲ್ಲಿ ಏನಾಗುತ್ತಿದೆ ತಿಳಿದಿಲ್ಲ ಎಂದರೆ ಹೇಗೆ? ಈ ರೀತಿ ಸಮಾಧಾನಪಡಿಸುವ ಮಾತುಗಳು ಬೇಡ ಎಂದು ಅಸಮಾಧಾನ ಹೊರಹಾಕಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರಿನಲ್ಲಿ ಯಾವುದೇ ಡ್ರಗ್ ಪತ್ತೆಯಾಗಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್‌ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ…

23 mins ago

ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌…

34 mins ago

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…

1 hour ago

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ…

2 hours ago

ಮೆಟ್ರೋ ದರ ಹೆಚ್ಚಳ ವಿಚಾರ: ಚೇರ್ಮನ್‌ ಜೊತೆ ಮಾತುಕತೆ ನಡೆಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್‌ ಜೊತೆ ಮಾತನಾಡುವೆ ಎಂದು ಡಿಸಿಎಂ…

2 hours ago

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

2 hours ago