ರಾಷ್ಟ್ರೀಯ

ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ರಾಮ್‌ದೇವ್‌-ಬಾಲಕೃಷ್ಣ : ನ್ಯಾಯಾಧೀಶರ ತರಾಟೆ !

ನವದೆಹಲಿ: ಸುಳ್ಳು ಜಾಹೀರಾತುಗಳನ್ನು ಪ್ರಸಾರ ಮಾಡುವ ಮೂಲಕ ಆಯುರ್ವೇದ ಉತ್ಪನ್ನಗಳನ್ನು ಉತ್ತೇಜಿಸಲು  ಪ್ರಯತ್ನ ಮಾಡಿದ ಪ್ರಕರಣದಲ್ಲಿ ಕೋರ್ಟ್ ಆದೇಶ ಉಲ್ಲಂಘಿಸಿದ ಪತಂಜಲಿ ಸಂಸ್ಥೆಯ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ  ಮತ್ತು ಯೋಗ ಗುರು ಬಾಬಾ ರಾಮದೇವ್ ಅವರು ಕೋರಿದ ಕ್ಷಮೆಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಭಾರತೀಯ ವೈದ್ಯಕೀಯ ಸಂಸ್ಥೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾ. ಹಿಮಕೊಹ್ಲಿ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದ್ದು, ಮಂಗಳವಾರವಾದ ಇಂದು ಕೋರ್ಟ್ ಮುಂದೆ ಹಾಜರಾಗಿದ್ದ ಆಚಾರ್ಯ ಬಾಲಕೃಷ್ಣ ಮತ್ತು ಯೋಗ ಗುರು ಬಾಬಾ ರಾಮದೇವ್  ವಿರುದ್ಧ ತೀವ್ರ ಅಸಮಧಾನ ಹೊರ ಹಾಕಿದೆ.

ಕಳೆದ ನವೆಂಬರ್‌ನಲ್ಲಿ ಪತಂಜಲಿ ಸಂಸ್ಥೆ ಪರ ವಕೀಲರು ನ್ಯಾಯಾಲಯದ ಮುಂದೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ತಡೆಯುವುದಾಗಿ ಭರವಸೆ ನೀಡಿದ ಹೊರತಾಗಿಯೂ ಪತಂಜಲಿ ಸಂಸ್ಥೆ ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡಿತ್ತು. ಈ ಹಿನ್ನಲೆ ಕೋರ್ಟ್ ಫೆಬ್ರವರಿ 27 ರಂದು ಪತಂಜಲಿ ಸಂಸ್ಥೆ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕರಾದ ಆಚಾರ್ಯ ಬಾಲಕೃಷ್ಣ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಿತ್ತು, ಖುದ್ದು ಹಾಜರಾಗಲು ಸೂಚಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಿಸಲು ನೋಟಿಸ್ ನೀಡಿದ್ದರೂ ನಿರ್ಲಕ್ಷಿಸಿದ್ದ ಈ ಇಬ್ಬರೂ ಕೋರ್ಟ್ ಮುಂದೆ ಖುದ್ದು ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ತಾಕೀತು ಮಾಡಿತ್ತು.

ಮಂಗಳವಾರ (ಏಪ್ರಿಲ್‌ 2) ಕೋರ್ಟ್ ಮುಂದೆ ಹಾಜರಾದ ಆಚಾರ್ಯ ಬಾಲಕೃಷ್ಣ ಮತ್ತು ಬಾಬಾ ರಾಮದೇವ್ ಬೇಷರತ್ ಕ್ಷಮೆ ಕೋರಿ ಅಫಿಡವಿಟ್ ಸಲ್ಲಿಸಿದರು. ಅಫಿಡೆವಿಟ್ ನಲ್ಲಿ ಜಾಹೀರಾತು ಪ್ರಸಾರಕ್ಕೆ ತಡೆ ನೀಡುವ ಆದೇಶ ನಮ್ಮ ಮಾಧ್ಯಮ ವಿಭಾಗಕ್ಕೆ ತಿಳಿದಿರಲಿಲ್ಲ ಹೀಗಾಗೀ ತಪ್ಪಾಗಿದೆ ಎಂದು ಆಚಾರ್ಯ ಬಾಲಕೃಷ್ಣ ಕ್ಷಮೆ ಕೇಳಿದ್ದರು, ಆದರೆ ಈ ಕಾರಣವನ್ನು ಕೋರ್ಟ್ ನಿರಾಕರಿಸಿತು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಈ ವಿಷಯದಲ್ಲಿ ʻಅಜ್ಞಾನವನ್ನು ತೋರಿಸಲುʼ ಸಾಧ್ಯವಿಲ್ಲ ಮತ್ತು ಮಾಧ್ಯಮ ವಿಭಾಗವನ್ನು ʻಸ್ವತಂತ್ರ ದ್ವೀಪʼ ಎಂದು ಪರಿಗಣಿಸಲಾಗುವುದಿಲ್ಲ. ಒಮ್ಮೆ ನ್ಯಾಯಾಲಯಕ್ಕೆ ಭರವಸೆ ನೀಡಿದರೆ ನಂತರ ಅದನ್ನು ಸಂಪೂರ್ಣವಾಗಿ ಪಾಲಿಸಬೇಕು. ಕೆಳ ಹಂತಕ್ಕೆ ನಿರ್ದೇಶಿಸುವುದು ಯಾರ ಕರ್ತವ್ಯ? ಎಂದು ನ್ಯಾಯಮೂರ್ತಿ ‌ಹಿಮ ಕೊಹ್ಲಿ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಚಾರ್ಯ ಬಾಲಕೃಷ್ಣ ಪರ ವಕೀಲರು ಇದರಲ್ಲಿ ಲೋಪವಾಗಿದೆ ಎಂದು ಒಪ್ಪಿಕೊಂಡರು, ಅದಕ್ಕಾಗಿ ವಿಷಾದ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ನ್ಯಾ. ಹಿಮ ಕೊಹ್ಲಿ, ನಿಮ್ಮ ಪಶ್ಚಾತ್ತಾಪವು ನ್ಯಾಯಾಲಯಕ್ಕೆ ಸಾಕಾಗದೇ ಇರಬಹುದು. ಈಗ ನೀವು ಕ್ಷಮಿಸಿ ಎಂದು ಹೇಳಿದ್ದಕ್ಕೆ, ನಾವು ಕ್ಷಮಿಸಿದ್ದೇವೆ ಅಂತ ಹೇಳಬಹುದು. ಅಂತಹ ವಿವರಣೆಯನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ, ನಿಮ್ಮ ಮಾಧ್ಯಮ ವಿಭಾಗವು ಸ್ವತಂತ್ರ ಇಲಾಖೆಯಲ್ಲ, ಅಲ್ಲವೇ? ನ್ಯಾಯಾಲಯದ ವಿಚಾರಣೆಯಲ್ಲಿ ಏನಾಗುತ್ತಿದೆ ತಿಳಿದಿಲ್ಲ ಎಂದರೆ ಹೇಗೆ? ಈ ರೀತಿ ಸಮಾಧಾನಪಡಿಸುವ ಮಾತುಗಳು ಬೇಡ ಎಂದು ಅಸಮಾಧಾನ ಹೊರಹಾಕಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

5 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

6 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

7 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

8 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

9 hours ago