ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು 3 ರಾಜ್ಯಗಳ 18 ಸ್ಥಳಗಳಲ್ಲಿ ದಾಳಿ ನಡೆಸಿದ ಬಳಿಕ ಈ ಪ್ರಕರಣಕ್ಕೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್ಐಎ ತಂಡಗಳು ದಾಳಿ ನಡೆಸಿದ ನಂತರ ಮುಝಮ್ಮಿಲ್ ಶರೀಫ್ ಎಂಬಾತನನ್ನು ಎನ್ಐಎ ಬಂಧಿಸಿದೆ. ಶರೀಫ್ನನ್ನು ಬೆಂಗಳೂರಿನಿಂದ ಕರೆದೊಯ್ದು ಸಹ ಸಂಚುಕೋರನೆಂದು ಪರಿಗಣಿಸಿ ಕಸ್ಟಡಿಯಲ್ಲಿ ಇರಿಸಲಾಗಿದೆ ಎಂದು ಎನ್ಐಎ ಗುರುವಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನ ಬ್ರೂಕ್ಫೀಲ್ಡ್ನ ಐಟಿಪಿಎಲ್ ರಸ್ತೆಯಲ್ಲಿರುವ ಜನನಿಬಿಡ ಜನಪ್ರಿಯ ರೆಸ್ಟೋರೆಂಟ್ನಲ್ಲಿ ಮಾರ್ಚ್ 1 ರಂದು ಹ್ಯಾಂಡ್ಬ್ಯಾಗ್ನಲ್ಲಿ ಬಚ್ಚಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡ ನಂತರ ನೌಕರರು ಮತ್ತು ಗ್ರಾಹಕರು ಸೇರಿದಂತೆ ಒಂಬತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಮಾರ್ಚ್ 3 ರಂದು ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಎನ್ ಐಎ, ಸ್ಫೋಟ ನಡೆಸಿದ ಪ್ರಮುಖ ಆರೋಪಿ ಮುಸ್ಸಾವಿರ್ ಶಜೀಬ್ ಹುಸೇನ್ ನನ್ನು ಈ ಹಿಂದೆ ಗುರುತಿಸಿತ್ತು. ಇತರ ಪ್ರಕರಣಗಳಲ್ಲಿ ಏಜೆನ್ಸಿಗೆ ಬೇಕಾಗಿರುವ ಮತ್ತೊಬ್ಬ ಸಂಚುಕೋರ ಅಬ್ದುಲ್ ಮಥೀನ್ ತಾಹಾ ಎಂಬಾತನನ್ನೂ ಅದು ಗುರುತಿಸಿತ್ತು. ಇಬ್ಬರೂ ಪರಾರಿಯಾಗಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಮತ್ತು ಸ್ಫೋಟದ ಹಿಂದಿನ ಪಿತೂರಿಯನ್ನು ಬಯಲಿಗೆಳೆಯಲು ಕೇಂದ್ರ ಭಯೋತ್ಪಾದನಾ ನಿಗ್ರಹ ಸಂಸ್ಥೆ ಕಾರ್ಯ ಪ್ರವೃತ್ತರಾಗಿದ್ದಾರೆ.
ಫಾತಿಮಾ ರಲಿಯಾ ಯು ಟ್ಯೂಬ್ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್ಜಿಪಿಟಿಯ ಬಳಿ…
ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…
ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…