ರಾಷ್ಟ್ರೀಯ

ಸಾಲ ವಸೂಲಿಗೆ ಸಮಯ ನಿಗದಿ ಮಾಡಿದ ಆರ್‌ಬಿಐ

ಬೆಂಗಳೂರು : ಬ್ಯಾಂಕುಗಳಿಂದ ಸಾಲ ಪಡೆದ ಗ್ರಾಹಕರ ಹಿತದೃಷ್ಟಿಯಿಂದ ಆರ್‌ಬಿಐ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.

ಸಾಲ ಪಡೆದವರಿಗೆ ಕರೆ ಮಾಡಲು ಸಮಯವನ್ನು ನಿಗದಿಪಡಿಸುವ ಪ್ರಸ್ತಾಪವನ್ನು ಮಂಡಿಸಿದೆ. ಬೆಳಿಗ್ಗೆ 8 ಗಂಟೆಯ ಮುನ್ನ ಹಾಗೂ ಸಾಯಂಕಾಲ 7 ಗಂಟೆಯ ಬಳಿಕ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ಕರೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿದೆ.

ಗ್ರಾಹಕರು ಅನೇಕ ಸಂಕಷ್ಟಗಳಲ್ಲಿ ಸಿಲುಕಿ ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರು ಪಾವತಿಸಲು ಸಾಧ್ಯವಾಗಿರುವುದಿಲ್ಲ. ಬಹುತೇಕ ಬ್ಯಾಂಕುಗಳು ಹಾಗೂ ಫೈನಾನ್ಸ್ ಕಂಪನಿಗಳು ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿವೆ.

ಇವರಿಂದ ಸಾಲ ವಸೂಲಿ ಮಾಡುವ ಸಂದರ್ಭದಲ್ಲಿ ಗ್ರಾಹಕರಿಗೆ ತೊಂದರೆಯುಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರ್‌ಬಿಐ ಈ ರೀತಿಯಾದ ಗ್ರಾಹಕ ಹಿತ ರಕ್ಷಣಾ ಶಿಫಾರಸ್ಸನ್ನು ಆರ್‌ಬಿಐ ತನ್ನ ಬ್ಯಾಂಕ್ ಮಂಡಳಿಯ ಮುಂದೆ ಮಂಡಿಸಿದ್ದು, ಇದಕ್ಕೆ ಒಪ್ಪಿಗೆ ದೊರೆತ ನಂತರವೇ ಈ ನಿಯಮ ಜಾರಿಯಾಗಲಿದೆ.

ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ಸಿಬ್ಬಂದಿಗಳಿಗೆ ಸಮರ್ಪಕವಾದ ತರಬೇತಿ ನೀಡುವ ಮೂಲಕ ಅವರು ಯಾವುದೇ ಗ್ರಾಹಕರಿಗೆ ತೊಂದರೆ ನೀಡದಂತೆ ನೋಡಿಕೊಳ್ಳಬೇಕು. ಅಲ್ಲದೆ ಸಾಲವನ್ನು ವಸೂಲು ಮಾಡುವ ಭರದಲ್ಲಿ ಸಾಲಗಾರರು, ಅಥವಾ ಅವರ ಕುಟುಂಬಸ್ಥರ ಖಾಸಗಿತನದ ಜಾಗೃತೆ ಇರಬೇಕು. ಅವರ ವೈಯಕ್ತಿಕ ಮಾಹಿತಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ತಿಳಿಸಿದೆ.

ಅಲ್ಲದೆ ಯಾವುದೇ ತೆರನಾದ ಅಸಮಂಜಸವಲ್ಲದ ಮೊಬೈಲ್ ಸಂದೇಶ ಕಳುಹಿಸುವುದು, ಗ್ರಾಹಕರಿಗೆ ಬೆದರಿಕೆ ಹಾಕುವುದನ್ನು ಮಾಡಬಾರದು ಎಂದು ಆರ್‌ಬಿಐ ತನ್ನ ಪ್ರಸ್ತಾವದಲ್ಲಿ ಎಚ್ಚರಿಸಿದೆ.

lokesh

Recent Posts

ಯಳಂದೂರು | ಕೆರೆಗಳಿಂದ ಅಕ್ರಮ ಮಣ್ಣು ಸಾಗಾಟ ; ಅಧಿಕಾರಿಗಳ ಜಾಣಮೌನ

ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ…

37 mins ago

ಮಹಿಳಾ ಮೀಸಲಾತಿ ಕಾನೂನು : ಶುಕ್ರವಾರ ಸಂಜೆ 4 ಗಂಟೆಗೆ ಮತದಾನ

ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…

2 hours ago

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌…

2 hours ago

ನಾಳೆ ದಿಲ್ಲಿಗೆ ಸಿಎಂ, ಡಿಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಮತ್ತಷ್ಟು…

3 hours ago

ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ: ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ…

3 hours ago

ಎಚ್.ಡಿ.ಕೋಟೆ| ಕಾಡಾನೆ ದಾಳಿ: ಮಹಿಳೆ ಸ್ಥಿತಿ ಗಂಭೀರ

ಮಂಜು ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ವರದಿಗಾರರು  ಎಚ್.ಡಿ.ಕೋಟೆ: ಜಮೀನಿಗೆ ಸೌದೆ ತರಲು ಹೋದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ…

3 hours ago