ರಾಷ್ಟ್ರೀಯ

ಸಾಲ ವಸೂಲಿಗೆ ಸಮಯ ನಿಗದಿ ಮಾಡಿದ ಆರ್‌ಬಿಐ

ಬೆಂಗಳೂರು : ಬ್ಯಾಂಕುಗಳಿಂದ ಸಾಲ ಪಡೆದ ಗ್ರಾಹಕರ ಹಿತದೃಷ್ಟಿಯಿಂದ ಆರ್‌ಬಿಐ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.

ಸಾಲ ಪಡೆದವರಿಗೆ ಕರೆ ಮಾಡಲು ಸಮಯವನ್ನು ನಿಗದಿಪಡಿಸುವ ಪ್ರಸ್ತಾಪವನ್ನು ಮಂಡಿಸಿದೆ. ಬೆಳಿಗ್ಗೆ 8 ಗಂಟೆಯ ಮುನ್ನ ಹಾಗೂ ಸಾಯಂಕಾಲ 7 ಗಂಟೆಯ ಬಳಿಕ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ಕರೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿದೆ.

ಗ್ರಾಹಕರು ಅನೇಕ ಸಂಕಷ್ಟಗಳಲ್ಲಿ ಸಿಲುಕಿ ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರು ಪಾವತಿಸಲು ಸಾಧ್ಯವಾಗಿರುವುದಿಲ್ಲ. ಬಹುತೇಕ ಬ್ಯಾಂಕುಗಳು ಹಾಗೂ ಫೈನಾನ್ಸ್ ಕಂಪನಿಗಳು ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿವೆ.

ಇವರಿಂದ ಸಾಲ ವಸೂಲಿ ಮಾಡುವ ಸಂದರ್ಭದಲ್ಲಿ ಗ್ರಾಹಕರಿಗೆ ತೊಂದರೆಯುಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರ್‌ಬಿಐ ಈ ರೀತಿಯಾದ ಗ್ರಾಹಕ ಹಿತ ರಕ್ಷಣಾ ಶಿಫಾರಸ್ಸನ್ನು ಆರ್‌ಬಿಐ ತನ್ನ ಬ್ಯಾಂಕ್ ಮಂಡಳಿಯ ಮುಂದೆ ಮಂಡಿಸಿದ್ದು, ಇದಕ್ಕೆ ಒಪ್ಪಿಗೆ ದೊರೆತ ನಂತರವೇ ಈ ನಿಯಮ ಜಾರಿಯಾಗಲಿದೆ.

ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ಸಿಬ್ಬಂದಿಗಳಿಗೆ ಸಮರ್ಪಕವಾದ ತರಬೇತಿ ನೀಡುವ ಮೂಲಕ ಅವರು ಯಾವುದೇ ಗ್ರಾಹಕರಿಗೆ ತೊಂದರೆ ನೀಡದಂತೆ ನೋಡಿಕೊಳ್ಳಬೇಕು. ಅಲ್ಲದೆ ಸಾಲವನ್ನು ವಸೂಲು ಮಾಡುವ ಭರದಲ್ಲಿ ಸಾಲಗಾರರು, ಅಥವಾ ಅವರ ಕುಟುಂಬಸ್ಥರ ಖಾಸಗಿತನದ ಜಾಗೃತೆ ಇರಬೇಕು. ಅವರ ವೈಯಕ್ತಿಕ ಮಾಹಿತಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ತಿಳಿಸಿದೆ.

ಅಲ್ಲದೆ ಯಾವುದೇ ತೆರನಾದ ಅಸಮಂಜಸವಲ್ಲದ ಮೊಬೈಲ್ ಸಂದೇಶ ಕಳುಹಿಸುವುದು, ಗ್ರಾಹಕರಿಗೆ ಬೆದರಿಕೆ ಹಾಕುವುದನ್ನು ಮಾಡಬಾರದು ಎಂದು ಆರ್‌ಬಿಐ ತನ್ನ ಪ್ರಸ್ತಾವದಲ್ಲಿ ಎಚ್ಚರಿಸಿದೆ.

lokesh

Recent Posts

ಕಾರವಾರದ ಕದಂಬ ನೌಕನೆಲೆಗೆ ರಾಷ್ಟ್ರಪತಿ ಭೇಟಿ ನಾಳೆ

ಬೆಂಗಳೂರು‌ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…

19 mins ago

ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…

38 mins ago

ಜ.5ರಿಂದ ಉದ್ಯೋಗ ಖಾತ್ರಿ ಯೋಜನೆ ಬಚಾವ್‌ ಆಂದೋಲನ : ಸಿಎಂ

ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…

1 hour ago

ಇನ್ಮುಂದೆ ಭೀಮನ ಹತ್ತಿರ ಹೋಗಿ ವೀಡಿಯೋ, ಫೋಟೋ ತೆಗೆದರೆ ಬೀಳುತ್ತೆ ಕೇಸ್‌

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…

2 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

3 hours ago

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

3 hours ago