ರಾಷ್ಟ್ರೀಯ

ಸಾಲ ವಸೂಲಿಗೆ ಸಮಯ ನಿಗದಿ ಮಾಡಿದ ಆರ್‌ಬಿಐ

ಬೆಂಗಳೂರು : ಬ್ಯಾಂಕುಗಳಿಂದ ಸಾಲ ಪಡೆದ ಗ್ರಾಹಕರ ಹಿತದೃಷ್ಟಿಯಿಂದ ಆರ್‌ಬಿಐ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.

ಸಾಲ ಪಡೆದವರಿಗೆ ಕರೆ ಮಾಡಲು ಸಮಯವನ್ನು ನಿಗದಿಪಡಿಸುವ ಪ್ರಸ್ತಾಪವನ್ನು ಮಂಡಿಸಿದೆ. ಬೆಳಿಗ್ಗೆ 8 ಗಂಟೆಯ ಮುನ್ನ ಹಾಗೂ ಸಾಯಂಕಾಲ 7 ಗಂಟೆಯ ಬಳಿಕ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ಕರೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿದೆ.

ಗ್ರಾಹಕರು ಅನೇಕ ಸಂಕಷ್ಟಗಳಲ್ಲಿ ಸಿಲುಕಿ ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರು ಪಾವತಿಸಲು ಸಾಧ್ಯವಾಗಿರುವುದಿಲ್ಲ. ಬಹುತೇಕ ಬ್ಯಾಂಕುಗಳು ಹಾಗೂ ಫೈನಾನ್ಸ್ ಕಂಪನಿಗಳು ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿವೆ.

ಇವರಿಂದ ಸಾಲ ವಸೂಲಿ ಮಾಡುವ ಸಂದರ್ಭದಲ್ಲಿ ಗ್ರಾಹಕರಿಗೆ ತೊಂದರೆಯುಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರ್‌ಬಿಐ ಈ ರೀತಿಯಾದ ಗ್ರಾಹಕ ಹಿತ ರಕ್ಷಣಾ ಶಿಫಾರಸ್ಸನ್ನು ಆರ್‌ಬಿಐ ತನ್ನ ಬ್ಯಾಂಕ್ ಮಂಡಳಿಯ ಮುಂದೆ ಮಂಡಿಸಿದ್ದು, ಇದಕ್ಕೆ ಒಪ್ಪಿಗೆ ದೊರೆತ ನಂತರವೇ ಈ ನಿಯಮ ಜಾರಿಯಾಗಲಿದೆ.

ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ಸಿಬ್ಬಂದಿಗಳಿಗೆ ಸಮರ್ಪಕವಾದ ತರಬೇತಿ ನೀಡುವ ಮೂಲಕ ಅವರು ಯಾವುದೇ ಗ್ರಾಹಕರಿಗೆ ತೊಂದರೆ ನೀಡದಂತೆ ನೋಡಿಕೊಳ್ಳಬೇಕು. ಅಲ್ಲದೆ ಸಾಲವನ್ನು ವಸೂಲು ಮಾಡುವ ಭರದಲ್ಲಿ ಸಾಲಗಾರರು, ಅಥವಾ ಅವರ ಕುಟುಂಬಸ್ಥರ ಖಾಸಗಿತನದ ಜಾಗೃತೆ ಇರಬೇಕು. ಅವರ ವೈಯಕ್ತಿಕ ಮಾಹಿತಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ತಿಳಿಸಿದೆ.

ಅಲ್ಲದೆ ಯಾವುದೇ ತೆರನಾದ ಅಸಮಂಜಸವಲ್ಲದ ಮೊಬೈಲ್ ಸಂದೇಶ ಕಳುಹಿಸುವುದು, ಗ್ರಾಹಕರಿಗೆ ಬೆದರಿಕೆ ಹಾಕುವುದನ್ನು ಮಾಡಬಾರದು ಎಂದು ಆರ್‌ಬಿಐ ತನ್ನ ಪ್ರಸ್ತಾವದಲ್ಲಿ ಎಚ್ಚರಿಸಿದೆ.

lokesh

Recent Posts

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

11 mins ago

ಬಾಲ್ಯವಿವಾಹ, ವರದಕ್ಷಿಣೆ ಕಾಯ್ದೆ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ…

24 mins ago

ಮೊದಲ ಬಾರಿ ಗೆದ್ದ 5 ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು: ಪ್ರದೀಪ್‌ ಈಶ್ವರ್‌

ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್‌ಗೆ…

36 mins ago

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200…

47 mins ago

ನಮಗೂ ಸಚಿವ ಸ್ಥಾನ ಕೊಡಿ: ಸಂಪುಟ ಪುನಾರಚನೆಗೆ 24 ಎಂಎಲ್‌ಸಿಗಳಿಂದ ಪತ್ರ

ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24…

57 mins ago

ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿ, ಅದನ್ನು ಸಾಬೀತು ಪಡಿಸಿದ್ದೇನೆ ಎಂದು…

1 hour ago