ಬೆಂಗಳೂರು : ಬ್ಯಾಂಕುಗಳಿಂದ ಸಾಲ ಪಡೆದ ಗ್ರಾಹಕರ ಹಿತದೃಷ್ಟಿಯಿಂದ ಆರ್ಬಿಐ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.
ಸಾಲ ಪಡೆದವರಿಗೆ ಕರೆ ಮಾಡಲು ಸಮಯವನ್ನು ನಿಗದಿಪಡಿಸುವ ಪ್ರಸ್ತಾಪವನ್ನು ಮಂಡಿಸಿದೆ. ಬೆಳಿಗ್ಗೆ 8 ಗಂಟೆಯ ಮುನ್ನ ಹಾಗೂ ಸಾಯಂಕಾಲ 7 ಗಂಟೆಯ ಬಳಿಕ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ಕರೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿದೆ.
ಗ್ರಾಹಕರು ಅನೇಕ ಸಂಕಷ್ಟಗಳಲ್ಲಿ ಸಿಲುಕಿ ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರು ಪಾವತಿಸಲು ಸಾಧ್ಯವಾಗಿರುವುದಿಲ್ಲ. ಬಹುತೇಕ ಬ್ಯಾಂಕುಗಳು ಹಾಗೂ ಫೈನಾನ್ಸ್ ಕಂಪನಿಗಳು ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿವೆ.
ಇವರಿಂದ ಸಾಲ ವಸೂಲಿ ಮಾಡುವ ಸಂದರ್ಭದಲ್ಲಿ ಗ್ರಾಹಕರಿಗೆ ತೊಂದರೆಯುಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರ್ಬಿಐ ಈ ರೀತಿಯಾದ ಗ್ರಾಹಕ ಹಿತ ರಕ್ಷಣಾ ಶಿಫಾರಸ್ಸನ್ನು ಆರ್ಬಿಐ ತನ್ನ ಬ್ಯಾಂಕ್ ಮಂಡಳಿಯ ಮುಂದೆ ಮಂಡಿಸಿದ್ದು, ಇದಕ್ಕೆ ಒಪ್ಪಿಗೆ ದೊರೆತ ನಂತರವೇ ಈ ನಿಯಮ ಜಾರಿಯಾಗಲಿದೆ.
ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ಸಿಬ್ಬಂದಿಗಳಿಗೆ ಸಮರ್ಪಕವಾದ ತರಬೇತಿ ನೀಡುವ ಮೂಲಕ ಅವರು ಯಾವುದೇ ಗ್ರಾಹಕರಿಗೆ ತೊಂದರೆ ನೀಡದಂತೆ ನೋಡಿಕೊಳ್ಳಬೇಕು. ಅಲ್ಲದೆ ಸಾಲವನ್ನು ವಸೂಲು ಮಾಡುವ ಭರದಲ್ಲಿ ಸಾಲಗಾರರು, ಅಥವಾ ಅವರ ಕುಟುಂಬಸ್ಥರ ಖಾಸಗಿತನದ ಜಾಗೃತೆ ಇರಬೇಕು. ಅವರ ವೈಯಕ್ತಿಕ ಮಾಹಿತಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ತಿಳಿಸಿದೆ.
ಅಲ್ಲದೆ ಯಾವುದೇ ತೆರನಾದ ಅಸಮಂಜಸವಲ್ಲದ ಮೊಬೈಲ್ ಸಂದೇಶ ಕಳುಹಿಸುವುದು, ಗ್ರಾಹಕರಿಗೆ ಬೆದರಿಕೆ ಹಾಕುವುದನ್ನು ಮಾಡಬಾರದು ಎಂದು ಆರ್ಬಿಐ ತನ್ನ ಪ್ರಸ್ತಾವದಲ್ಲಿ ಎಚ್ಚರಿಸಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…