ಬೆಂಗಳೂರು : ಬ್ಯಾಂಕುಗಳಿಂದ ಸಾಲ ಪಡೆದ ಗ್ರಾಹಕರ ಹಿತದೃಷ್ಟಿಯಿಂದ ಆರ್ಬಿಐ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.
ಸಾಲ ಪಡೆದವರಿಗೆ ಕರೆ ಮಾಡಲು ಸಮಯವನ್ನು ನಿಗದಿಪಡಿಸುವ ಪ್ರಸ್ತಾಪವನ್ನು ಮಂಡಿಸಿದೆ. ಬೆಳಿಗ್ಗೆ 8 ಗಂಟೆಯ ಮುನ್ನ ಹಾಗೂ ಸಾಯಂಕಾಲ 7 ಗಂಟೆಯ ಬಳಿಕ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ಕರೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿದೆ.
ಗ್ರಾಹಕರು ಅನೇಕ ಸಂಕಷ್ಟಗಳಲ್ಲಿ ಸಿಲುಕಿ ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರು ಪಾವತಿಸಲು ಸಾಧ್ಯವಾಗಿರುವುದಿಲ್ಲ. ಬಹುತೇಕ ಬ್ಯಾಂಕುಗಳು ಹಾಗೂ ಫೈನಾನ್ಸ್ ಕಂಪನಿಗಳು ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿವೆ.
ಇವರಿಂದ ಸಾಲ ವಸೂಲಿ ಮಾಡುವ ಸಂದರ್ಭದಲ್ಲಿ ಗ್ರಾಹಕರಿಗೆ ತೊಂದರೆಯುಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರ್ಬಿಐ ಈ ರೀತಿಯಾದ ಗ್ರಾಹಕ ಹಿತ ರಕ್ಷಣಾ ಶಿಫಾರಸ್ಸನ್ನು ಆರ್ಬಿಐ ತನ್ನ ಬ್ಯಾಂಕ್ ಮಂಡಳಿಯ ಮುಂದೆ ಮಂಡಿಸಿದ್ದು, ಇದಕ್ಕೆ ಒಪ್ಪಿಗೆ ದೊರೆತ ನಂತರವೇ ಈ ನಿಯಮ ಜಾರಿಯಾಗಲಿದೆ.
ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ಸಿಬ್ಬಂದಿಗಳಿಗೆ ಸಮರ್ಪಕವಾದ ತರಬೇತಿ ನೀಡುವ ಮೂಲಕ ಅವರು ಯಾವುದೇ ಗ್ರಾಹಕರಿಗೆ ತೊಂದರೆ ನೀಡದಂತೆ ನೋಡಿಕೊಳ್ಳಬೇಕು. ಅಲ್ಲದೆ ಸಾಲವನ್ನು ವಸೂಲು ಮಾಡುವ ಭರದಲ್ಲಿ ಸಾಲಗಾರರು, ಅಥವಾ ಅವರ ಕುಟುಂಬಸ್ಥರ ಖಾಸಗಿತನದ ಜಾಗೃತೆ ಇರಬೇಕು. ಅವರ ವೈಯಕ್ತಿಕ ಮಾಹಿತಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ತಿಳಿಸಿದೆ.
ಅಲ್ಲದೆ ಯಾವುದೇ ತೆರನಾದ ಅಸಮಂಜಸವಲ್ಲದ ಮೊಬೈಲ್ ಸಂದೇಶ ಕಳುಹಿಸುವುದು, ಗ್ರಾಹಕರಿಗೆ ಬೆದರಿಕೆ ಹಾಕುವುದನ್ನು ಮಾಡಬಾರದು ಎಂದು ಆರ್ಬಿಐ ತನ್ನ ಪ್ರಸ್ತಾವದಲ್ಲಿ ಎಚ್ಚರಿಸಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…