ರಾಷ್ಟ್ರೀಯ

ಕೇಂದ್ರದಿಂದ ₹22,303 ಕೋಟಿ ರಸಗೊಬ್ಬರ ಸಬ್ಸಿಡಿ ಬಿಡುಗಡೆ

ನವದೆಹಲಿ : ಕೇಂದ್ರ ಸರಕಾರ ಫಾಸ್ಫೇಟ್‌ ಮತ್ತು ಪೊಟ್ಯಾಷಿಯಂ (ಪಿ ಆ್ಯಂಡ್‌ ಕೆ) ರಸಗೊಬ್ಬರಗಳಿಗೆ 22,303 ಕೋಟಿ ರೂ. ಸಬ್ಸಿಡಿ ಮಂಜೂರಿಗೆ ಬುಧವಾರ ಅನುಮೋದನೆ ನೀಡಿದೆ.

“ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಬದಲಾವಣೆ ಇಲ್ಲದೇ ಸಬ್ಸಿಡಿ ದರ ನೀತಿ ಮುಂದುವರಿಸಲಾಗಿದೆ,” ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಹೇಳಿದರು. ಹಿಂಗಾರಿಗೆ ಪೂರಕವಾಗಿ ಅಕ್ಟೋಬರ್‌ 1ರಿಂದ ಮಾರ್ಚ್ 31ರ ತನಕ ಈ ಸಬ್ಸಿಡಿ ಅನ್ವಯವಾಗಲಿದೆ.

ಇದೇ ವೇಳೆ ಡಿಎಪಿ ರಸಗೊಬ್ಬರ ಪ್ರತಿ ಟನ್‌ಗೆ 4,500 ರೂ. ಮತ್ತು ಎನ್‌ಪಿಕೆ ರಸಗೊಬ್ಬರ ಪ್ರತಿ ಬ್ಯಾಗ್‌ಗೆ 1,470 ರೂ.ಗಳಿಗೆ ಲಭ್ಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. 25 ದರ್ಜೆಗಳ ಪಿ ಆ್ಯಂಡ್‌ ಕೆ ರಸಗೊಬ್ಬರಗಳನ್ನು ತಯಾರಕರು ಮತ್ತು ಆಮದುದಾರರ ಮೂಲಕ ರೈತರಿಗೆ ಸಬ್ಸಿಡಿ ದರದಲ್ಲಿ ಒದಗಿಸಲಾಗುವುದೆಂದು ಕೇಂದ್ರ ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವ ಗೊಬ್ಬರಕ್ಕೆ ಎಷ್ಟು ಸಬ್ಸಿಡಿ?

ಕ್ರ. ಸಂ. ರಸಗೊಬ್ಬರ ಸಬ್ಸಿಡಿ (ಪ್ರತಿ ಕೆ.ಜಿಗೆ)
1 ನೈಟ್ರೋಜನ್‌ 47.2 ರೂ.
2 ಫಾಸ್ಫರಸ್‌ 20.82 ರೂ.
3 ಪೊಟ್ಯಾಶ್‌ 2.38 ರೂ.
4 ಸಲ್ಫರ್‌ 1.89 ರೂ.

ಆದರೆ, ಸಂಪುಟ ಸಭೆಯು ಈ ಬಾರಿ ಅನುಮೋದನೆ ನೀಡಿದ ಅನುದಾನದಲ್ಲಿ ಭಾರೀ ಇಳಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಸಬ್ಸಿಡಿಯಲ್ಲಿ ಶೇ. 57ರಷ್ಟು ಕಡಿತ ಮಾಡಲಾಗಿದೆ. 2022-23ನೇ ಸಾಲಿನಲ್ಲಿ ಖಾರಿಫ್ ಮತ್ತು ರಾಬಿ ಸೀಸನ್‌ಗಳಿಗೆ ಒಟ್ಟು 1.12 ಲಕ್ಷ ಕೋಟಿ ರೂ. ಸಬ್ಸಿಡಿ ಬಿಡುಗಡೆ ಮಾಡಲಾಗಿದ್ದರೆ, ಪ್ರಸಕ್ತ ಹಣಕಾಸು ವರ್ಷದಲ್ಲಿ ಯೂರಿಯೇತರ ರಸಗೊಬ್ಬರಗಳ ಸಬ್ಸಿಡಿ ಶೇ. 46 ರಷ್ಟು ಕಡಿಮೆಯಾಗಿ 60,303 ಕೋಟಿ ರೂ.ಗೆ ಇಳಿದಿದೆ.

ಅಕ್ಟೋಬರ್ 1ರಿಂದ ಪ್ರತಿ ಕೆಜಿ ನೈಟ್ರೋಜನ್‌ಗೆ 47.02 ರೂ., ಫಾಸ್ಪರಸ್‌ಗೆ 20.82 ರೂ., ಪೊಟ್ಯಾಶ್‌ಗೆ 2.38 ರೂ. ಮತ್ತು ಸಲ್ಫರ್‌ಗೆ 1.89 ರೂ. ಸಬ್ಸಿಡಿ ನೀಡಲು ಸಂಪುಟ ಅನುಮೋದನೆ ನೀಡಿದೆ. ಕಳೆದ ಆರ್ಥಿಕ ವರ್ಷದಲ್ಲಿ ನೈಟ್ರೋಜನ್‌ಗೆ ಕೆಜಿಗೆ 98.2 ರೂ., ಫಾಸ್ಪರಸ್‌ಗೆ 66.93 ರೂ., ಪೊಟ್ಯಾಶ್‌ಗೆ 23.65 ರೂ. ಮತ್ತು ಸಲ್ಫರ್‌ಗೆ ಕೆಜಿಗೆ 6.12 ರೂ. ಸಹಾಯಧನ ಮಂಜೂರಾಗಿತ್ತು.

andolanait

Recent Posts

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

4 mins ago

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

22 mins ago

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ…

43 mins ago

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

1 hour ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

3 hours ago