ರಾಷ್ಟ್ರೀಯ

ಕೇಂದ್ರದಿಂದ ₹22,303 ಕೋಟಿ ರಸಗೊಬ್ಬರ ಸಬ್ಸಿಡಿ ಬಿಡುಗಡೆ

ನವದೆಹಲಿ : ಕೇಂದ್ರ ಸರಕಾರ ಫಾಸ್ಫೇಟ್‌ ಮತ್ತು ಪೊಟ್ಯಾಷಿಯಂ (ಪಿ ಆ್ಯಂಡ್‌ ಕೆ) ರಸಗೊಬ್ಬರಗಳಿಗೆ 22,303 ಕೋಟಿ ರೂ. ಸಬ್ಸಿಡಿ ಮಂಜೂರಿಗೆ ಬುಧವಾರ ಅನುಮೋದನೆ ನೀಡಿದೆ.

“ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಬದಲಾವಣೆ ಇಲ್ಲದೇ ಸಬ್ಸಿಡಿ ದರ ನೀತಿ ಮುಂದುವರಿಸಲಾಗಿದೆ,” ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಹೇಳಿದರು. ಹಿಂಗಾರಿಗೆ ಪೂರಕವಾಗಿ ಅಕ್ಟೋಬರ್‌ 1ರಿಂದ ಮಾರ್ಚ್ 31ರ ತನಕ ಈ ಸಬ್ಸಿಡಿ ಅನ್ವಯವಾಗಲಿದೆ.

ಇದೇ ವೇಳೆ ಡಿಎಪಿ ರಸಗೊಬ್ಬರ ಪ್ರತಿ ಟನ್‌ಗೆ 4,500 ರೂ. ಮತ್ತು ಎನ್‌ಪಿಕೆ ರಸಗೊಬ್ಬರ ಪ್ರತಿ ಬ್ಯಾಗ್‌ಗೆ 1,470 ರೂ.ಗಳಿಗೆ ಲಭ್ಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. 25 ದರ್ಜೆಗಳ ಪಿ ಆ್ಯಂಡ್‌ ಕೆ ರಸಗೊಬ್ಬರಗಳನ್ನು ತಯಾರಕರು ಮತ್ತು ಆಮದುದಾರರ ಮೂಲಕ ರೈತರಿಗೆ ಸಬ್ಸಿಡಿ ದರದಲ್ಲಿ ಒದಗಿಸಲಾಗುವುದೆಂದು ಕೇಂದ್ರ ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವ ಗೊಬ್ಬರಕ್ಕೆ ಎಷ್ಟು ಸಬ್ಸಿಡಿ?

ಕ್ರ. ಸಂ. ರಸಗೊಬ್ಬರ ಸಬ್ಸಿಡಿ (ಪ್ರತಿ ಕೆ.ಜಿಗೆ)
1 ನೈಟ್ರೋಜನ್‌ 47.2 ರೂ.
2 ಫಾಸ್ಫರಸ್‌ 20.82 ರೂ.
3 ಪೊಟ್ಯಾಶ್‌ 2.38 ರೂ.
4 ಸಲ್ಫರ್‌ 1.89 ರೂ.

ಆದರೆ, ಸಂಪುಟ ಸಭೆಯು ಈ ಬಾರಿ ಅನುಮೋದನೆ ನೀಡಿದ ಅನುದಾನದಲ್ಲಿ ಭಾರೀ ಇಳಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಸಬ್ಸಿಡಿಯಲ್ಲಿ ಶೇ. 57ರಷ್ಟು ಕಡಿತ ಮಾಡಲಾಗಿದೆ. 2022-23ನೇ ಸಾಲಿನಲ್ಲಿ ಖಾರಿಫ್ ಮತ್ತು ರಾಬಿ ಸೀಸನ್‌ಗಳಿಗೆ ಒಟ್ಟು 1.12 ಲಕ್ಷ ಕೋಟಿ ರೂ. ಸಬ್ಸಿಡಿ ಬಿಡುಗಡೆ ಮಾಡಲಾಗಿದ್ದರೆ, ಪ್ರಸಕ್ತ ಹಣಕಾಸು ವರ್ಷದಲ್ಲಿ ಯೂರಿಯೇತರ ರಸಗೊಬ್ಬರಗಳ ಸಬ್ಸಿಡಿ ಶೇ. 46 ರಷ್ಟು ಕಡಿಮೆಯಾಗಿ 60,303 ಕೋಟಿ ರೂ.ಗೆ ಇಳಿದಿದೆ.

ಅಕ್ಟೋಬರ್ 1ರಿಂದ ಪ್ರತಿ ಕೆಜಿ ನೈಟ್ರೋಜನ್‌ಗೆ 47.02 ರೂ., ಫಾಸ್ಪರಸ್‌ಗೆ 20.82 ರೂ., ಪೊಟ್ಯಾಶ್‌ಗೆ 2.38 ರೂ. ಮತ್ತು ಸಲ್ಫರ್‌ಗೆ 1.89 ರೂ. ಸಬ್ಸಿಡಿ ನೀಡಲು ಸಂಪುಟ ಅನುಮೋದನೆ ನೀಡಿದೆ. ಕಳೆದ ಆರ್ಥಿಕ ವರ್ಷದಲ್ಲಿ ನೈಟ್ರೋಜನ್‌ಗೆ ಕೆಜಿಗೆ 98.2 ರೂ., ಫಾಸ್ಪರಸ್‌ಗೆ 66.93 ರೂ., ಪೊಟ್ಯಾಶ್‌ಗೆ 23.65 ರೂ. ಮತ್ತು ಸಲ್ಫರ್‌ಗೆ ಕೆಜಿಗೆ 6.12 ರೂ. ಸಹಾಯಧನ ಮಂಜೂರಾಗಿತ್ತು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago