ರಾಷ್ಟ್ರೀಯ

ಕೇಂದ್ರದಿಂದ ₹22,303 ಕೋಟಿ ರಸಗೊಬ್ಬರ ಸಬ್ಸಿಡಿ ಬಿಡುಗಡೆ

ನವದೆಹಲಿ : ಕೇಂದ್ರ ಸರಕಾರ ಫಾಸ್ಫೇಟ್‌ ಮತ್ತು ಪೊಟ್ಯಾಷಿಯಂ (ಪಿ ಆ್ಯಂಡ್‌ ಕೆ) ರಸಗೊಬ್ಬರಗಳಿಗೆ 22,303 ಕೋಟಿ ರೂ. ಸಬ್ಸಿಡಿ ಮಂಜೂರಿಗೆ ಬುಧವಾರ ಅನುಮೋದನೆ ನೀಡಿದೆ.

“ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಬದಲಾವಣೆ ಇಲ್ಲದೇ ಸಬ್ಸಿಡಿ ದರ ನೀತಿ ಮುಂದುವರಿಸಲಾಗಿದೆ,” ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಹೇಳಿದರು. ಹಿಂಗಾರಿಗೆ ಪೂರಕವಾಗಿ ಅಕ್ಟೋಬರ್‌ 1ರಿಂದ ಮಾರ್ಚ್ 31ರ ತನಕ ಈ ಸಬ್ಸಿಡಿ ಅನ್ವಯವಾಗಲಿದೆ.

ಇದೇ ವೇಳೆ ಡಿಎಪಿ ರಸಗೊಬ್ಬರ ಪ್ರತಿ ಟನ್‌ಗೆ 4,500 ರೂ. ಮತ್ತು ಎನ್‌ಪಿಕೆ ರಸಗೊಬ್ಬರ ಪ್ರತಿ ಬ್ಯಾಗ್‌ಗೆ 1,470 ರೂ.ಗಳಿಗೆ ಲಭ್ಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. 25 ದರ್ಜೆಗಳ ಪಿ ಆ್ಯಂಡ್‌ ಕೆ ರಸಗೊಬ್ಬರಗಳನ್ನು ತಯಾರಕರು ಮತ್ತು ಆಮದುದಾರರ ಮೂಲಕ ರೈತರಿಗೆ ಸಬ್ಸಿಡಿ ದರದಲ್ಲಿ ಒದಗಿಸಲಾಗುವುದೆಂದು ಕೇಂದ್ರ ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವ ಗೊಬ್ಬರಕ್ಕೆ ಎಷ್ಟು ಸಬ್ಸಿಡಿ?

ಕ್ರ. ಸಂ. ರಸಗೊಬ್ಬರ ಸಬ್ಸಿಡಿ (ಪ್ರತಿ ಕೆ.ಜಿಗೆ)
1 ನೈಟ್ರೋಜನ್‌ 47.2 ರೂ.
2 ಫಾಸ್ಫರಸ್‌ 20.82 ರೂ.
3 ಪೊಟ್ಯಾಶ್‌ 2.38 ರೂ.
4 ಸಲ್ಫರ್‌ 1.89 ರೂ.

ಆದರೆ, ಸಂಪುಟ ಸಭೆಯು ಈ ಬಾರಿ ಅನುಮೋದನೆ ನೀಡಿದ ಅನುದಾನದಲ್ಲಿ ಭಾರೀ ಇಳಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಸಬ್ಸಿಡಿಯಲ್ಲಿ ಶೇ. 57ರಷ್ಟು ಕಡಿತ ಮಾಡಲಾಗಿದೆ. 2022-23ನೇ ಸಾಲಿನಲ್ಲಿ ಖಾರಿಫ್ ಮತ್ತು ರಾಬಿ ಸೀಸನ್‌ಗಳಿಗೆ ಒಟ್ಟು 1.12 ಲಕ್ಷ ಕೋಟಿ ರೂ. ಸಬ್ಸಿಡಿ ಬಿಡುಗಡೆ ಮಾಡಲಾಗಿದ್ದರೆ, ಪ್ರಸಕ್ತ ಹಣಕಾಸು ವರ್ಷದಲ್ಲಿ ಯೂರಿಯೇತರ ರಸಗೊಬ್ಬರಗಳ ಸಬ್ಸಿಡಿ ಶೇ. 46 ರಷ್ಟು ಕಡಿಮೆಯಾಗಿ 60,303 ಕೋಟಿ ರೂ.ಗೆ ಇಳಿದಿದೆ.

ಅಕ್ಟೋಬರ್ 1ರಿಂದ ಪ್ರತಿ ಕೆಜಿ ನೈಟ್ರೋಜನ್‌ಗೆ 47.02 ರೂ., ಫಾಸ್ಪರಸ್‌ಗೆ 20.82 ರೂ., ಪೊಟ್ಯಾಶ್‌ಗೆ 2.38 ರೂ. ಮತ್ತು ಸಲ್ಫರ್‌ಗೆ 1.89 ರೂ. ಸಬ್ಸಿಡಿ ನೀಡಲು ಸಂಪುಟ ಅನುಮೋದನೆ ನೀಡಿದೆ. ಕಳೆದ ಆರ್ಥಿಕ ವರ್ಷದಲ್ಲಿ ನೈಟ್ರೋಜನ್‌ಗೆ ಕೆಜಿಗೆ 98.2 ರೂ., ಫಾಸ್ಪರಸ್‌ಗೆ 66.93 ರೂ., ಪೊಟ್ಯಾಶ್‌ಗೆ 23.65 ರೂ. ಮತ್ತು ಸಲ್ಫರ್‌ಗೆ ಕೆಜಿಗೆ 6.12 ರೂ. ಸಹಾಯಧನ ಮಂಜೂರಾಗಿತ್ತು.

andolanait

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

10 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

10 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

13 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

13 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

16 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

16 hours ago