ರಾಷ್ಟ್ರೀಯ

ಕೇಂದ್ರದಿಂದ ₹22,303 ಕೋಟಿ ರಸಗೊಬ್ಬರ ಸಬ್ಸಿಡಿ ಬಿಡುಗಡೆ

ನವದೆಹಲಿ : ಕೇಂದ್ರ ಸರಕಾರ ಫಾಸ್ಫೇಟ್‌ ಮತ್ತು ಪೊಟ್ಯಾಷಿಯಂ (ಪಿ ಆ್ಯಂಡ್‌ ಕೆ) ರಸಗೊಬ್ಬರಗಳಿಗೆ 22,303 ಕೋಟಿ ರೂ. ಸಬ್ಸಿಡಿ ಮಂಜೂರಿಗೆ ಬುಧವಾರ ಅನುಮೋದನೆ ನೀಡಿದೆ.

“ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಬದಲಾವಣೆ ಇಲ್ಲದೇ ಸಬ್ಸಿಡಿ ದರ ನೀತಿ ಮುಂದುವರಿಸಲಾಗಿದೆ,” ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಹೇಳಿದರು. ಹಿಂಗಾರಿಗೆ ಪೂರಕವಾಗಿ ಅಕ್ಟೋಬರ್‌ 1ರಿಂದ ಮಾರ್ಚ್ 31ರ ತನಕ ಈ ಸಬ್ಸಿಡಿ ಅನ್ವಯವಾಗಲಿದೆ.

ಇದೇ ವೇಳೆ ಡಿಎಪಿ ರಸಗೊಬ್ಬರ ಪ್ರತಿ ಟನ್‌ಗೆ 4,500 ರೂ. ಮತ್ತು ಎನ್‌ಪಿಕೆ ರಸಗೊಬ್ಬರ ಪ್ರತಿ ಬ್ಯಾಗ್‌ಗೆ 1,470 ರೂ.ಗಳಿಗೆ ಲಭ್ಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. 25 ದರ್ಜೆಗಳ ಪಿ ಆ್ಯಂಡ್‌ ಕೆ ರಸಗೊಬ್ಬರಗಳನ್ನು ತಯಾರಕರು ಮತ್ತು ಆಮದುದಾರರ ಮೂಲಕ ರೈತರಿಗೆ ಸಬ್ಸಿಡಿ ದರದಲ್ಲಿ ಒದಗಿಸಲಾಗುವುದೆಂದು ಕೇಂದ್ರ ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವ ಗೊಬ್ಬರಕ್ಕೆ ಎಷ್ಟು ಸಬ್ಸಿಡಿ?

ಕ್ರ. ಸಂ. ರಸಗೊಬ್ಬರ ಸಬ್ಸಿಡಿ (ಪ್ರತಿ ಕೆ.ಜಿಗೆ)
1 ನೈಟ್ರೋಜನ್‌ 47.2 ರೂ.
2 ಫಾಸ್ಫರಸ್‌ 20.82 ರೂ.
3 ಪೊಟ್ಯಾಶ್‌ 2.38 ರೂ.
4 ಸಲ್ಫರ್‌ 1.89 ರೂ.

ಆದರೆ, ಸಂಪುಟ ಸಭೆಯು ಈ ಬಾರಿ ಅನುಮೋದನೆ ನೀಡಿದ ಅನುದಾನದಲ್ಲಿ ಭಾರೀ ಇಳಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಸಬ್ಸಿಡಿಯಲ್ಲಿ ಶೇ. 57ರಷ್ಟು ಕಡಿತ ಮಾಡಲಾಗಿದೆ. 2022-23ನೇ ಸಾಲಿನಲ್ಲಿ ಖಾರಿಫ್ ಮತ್ತು ರಾಬಿ ಸೀಸನ್‌ಗಳಿಗೆ ಒಟ್ಟು 1.12 ಲಕ್ಷ ಕೋಟಿ ರೂ. ಸಬ್ಸಿಡಿ ಬಿಡುಗಡೆ ಮಾಡಲಾಗಿದ್ದರೆ, ಪ್ರಸಕ್ತ ಹಣಕಾಸು ವರ್ಷದಲ್ಲಿ ಯೂರಿಯೇತರ ರಸಗೊಬ್ಬರಗಳ ಸಬ್ಸಿಡಿ ಶೇ. 46 ರಷ್ಟು ಕಡಿಮೆಯಾಗಿ 60,303 ಕೋಟಿ ರೂ.ಗೆ ಇಳಿದಿದೆ.

ಅಕ್ಟೋಬರ್ 1ರಿಂದ ಪ್ರತಿ ಕೆಜಿ ನೈಟ್ರೋಜನ್‌ಗೆ 47.02 ರೂ., ಫಾಸ್ಪರಸ್‌ಗೆ 20.82 ರೂ., ಪೊಟ್ಯಾಶ್‌ಗೆ 2.38 ರೂ. ಮತ್ತು ಸಲ್ಫರ್‌ಗೆ 1.89 ರೂ. ಸಬ್ಸಿಡಿ ನೀಡಲು ಸಂಪುಟ ಅನುಮೋದನೆ ನೀಡಿದೆ. ಕಳೆದ ಆರ್ಥಿಕ ವರ್ಷದಲ್ಲಿ ನೈಟ್ರೋಜನ್‌ಗೆ ಕೆಜಿಗೆ 98.2 ರೂ., ಫಾಸ್ಪರಸ್‌ಗೆ 66.93 ರೂ., ಪೊಟ್ಯಾಶ್‌ಗೆ 23.65 ರೂ. ಮತ್ತು ಸಲ್ಫರ್‌ಗೆ ಕೆಜಿಗೆ 6.12 ರೂ. ಸಹಾಯಧನ ಮಂಜೂರಾಗಿತ್ತು.

andolanait

Recent Posts

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

2 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

4 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

4 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

5 hours ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

5 hours ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

10 hours ago