ಹೈದರಾಬಾದ್: ಪಂಚರಾಜ್ಯ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಇಂದು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೈದರಬಾದ್ನ ಎಲ್.ಬಿ.ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಸಕಲ ಸಿದ್ಧತೆಯಾಗಿದ್ದು, ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ.
ಈಗಾಗಲೇ ಪ್ರಮಾಣವಚನ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯನ್ನು ಸ್ವತಃ ರೇವಂತ್ ರೆಡ್ಡಿ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.
ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸೋನಿಯಾ ಗಾಂದಿ ಭಾಗಿಯಾಗುವ ಸಾಧ್ಯತೆ ಇದ್ದು, ರಾಜ್ಯದಿಂದ ಮುಖ್ಯಂಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಶೇಷ ವಿಮಾನದಲ್ಲಿ ತೆಲಂಗಾಣಕ್ಕೆ ತೆರಳಲಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಳಗಾವಿಗೆ ಹಿಂದಿರುಗಲಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…