ಬೆಂಗಳೂರು ಮೂಲದ ರಿಯಾನಾ ರಾಜು ಎಂಬ ತೃತೀಯ ಲಿಂಗಿ ಮಹಿಳೆ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆಯುವ ಮೂಲಕ ಅಯ್ಯಪ್ಪನ ದರ್ಶನ ಪಡೆದ ಮೊದಲ ತೃತೀಯಲಿಂಗಿ ಮಹಿಳೆ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ಹಲವು ವರ್ಷಗಳ ಹಿಂದೆ ಪುರುಷನಿಂದ ಮಹಿಳೆಯಾಗಿ ಬದಲಾಗಿದ್ದ ರಿಯಾನಾ ರಾಜು ಕೇರಳ ಸರ್ಕಾರದ ದೇವಸ್ವಂ ಬೋರ್ಡ್ ವೆಬ್ತಾಣದ ಮೂಲಕ ಪದೇಪದೇ ದೇವರ ದರ್ಶನಕ್ಕಾಗಿ ಅರ್ಜಿ ಸಲ್ಲಿಸುತ್ತಾ ಬಂದಿದ್ದರಾದರೂ ಒಮ್ಮೆಯೂ ಅವರಿಗೆ ಅನುಮತಿ ಸಿಕ್ಕಿರಲಿಲ್ಲ.
ಆದರೆ ಸತತವಾಗಿ ಪ್ರಯತ್ನಪಟ್ಟ ರಿಯಾನಾ ರಾಜು ಕೊನೆಗೂ ಅವಕಾಶ ಪಡೆದು ಯಶಸ್ವಿಯಾಗಿ ದೇವರ ದರ್ಶನ ಮಾಡಿ ಮುಗಿಸಿದ್ದಾರೆ. ಜನವರಿ 5ರಂದು ಶಬರಿಮಲೆ ತಲುಪಿದ ರಿಯಾನಾ ರಾಜು ಜನವರಿ 5ರಂದು ದರ್ಶನ ಪೂರೈಸಿದ್ದಾಗಿ ಹೇಳಿಕೊಂಡಿದ್ದಾರೆ.
ಇನ್ನು ತಾನು ದೇವಾಲಯ ತಲುಪಿದಾಗ ಅಲ್ಲಿನ ಭಕ್ತರು ಹಾಗೂ ಅರ್ಚಕನಿಂದ ನಿಂದನೆಗೆ ಒಳಗಾದ ವಿಷಯವನ್ನೂ ಸಹ ಬಿಚ್ಚಿಟ್ಟ ರಿಯಾನಾ ರಾಜು ತಾನು ಪುರುಷನಿಂದ ಮಹಿಳೆಯಾಗಿ ಬದಲಾದ ಕಾರಣ ಮಕ್ಕಳನ್ನು ಹೆರಲು ಸಾಧ್ಯವಿಲ್ಲ, ಹೀಗಾಗಿ ದೇವರ ದರ್ಶನ ಪಡೆಯಬಹುದು ಎಂದು ವಿವರಿಸಿದ್ದಾರೆ.
‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಮ್ಮೆಯ ನುಡಿ' ಆಂದೋಲನ: ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಭರ್ತಿಯಾಗಿವೆ.…
ಕೆ.ಬಿ.ರಮೇಶನಾಯಕ ವಿದ್ಯಾರಣ್ಯಪುರಂನ ಸಿವೇಜ್ ಫಾರಂನಲ್ಲಿ ಭರದಿಂದ ಸಾಗಿದ ಕಾಮಗಾರಿ ಮೈಸೂರು: ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಸ್ಥಳೀಯ ನಿವಾಸಿಗಳಿಗೆ ಕಂಟಕವಾಗಿದ್ದ…
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…