ರಾಷ್ಟ್ರೀಯ

ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಮೊದಲ ತೃತೀಯಲಿಂಗಿ ಮಹಿಳೆ

ಬೆಂಗಳೂರು ಮೂಲದ ರಿಯಾನಾ ರಾಜು ಎಂಬ ತೃತೀಯ ಲಿಂಗಿ ಮಹಿಳೆ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆಯುವ ಮೂಲಕ ಅಯ್ಯಪ್ಪನ ದರ್ಶನ ಪಡೆದ ಮೊದಲ ತೃತೀಯಲಿಂಗಿ ಮಹಿಳೆ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಹಲವು ವರ್ಷಗಳ ಹಿಂದೆ ಪುರುಷನಿಂದ ಮಹಿಳೆಯಾಗಿ ಬದಲಾಗಿದ್ದ ರಿಯಾನಾ ರಾಜು ಕೇರಳ ಸರ್ಕಾರದ ದೇವಸ್ವಂ ಬೋರ್ಡ್‌ ವೆಬ್‌ತಾಣದ ಮೂಲಕ ಪದೇಪದೇ ದೇವರ ದರ್ಶನಕ್ಕಾಗಿ ಅರ್ಜಿ ಸಲ್ಲಿಸುತ್ತಾ ಬಂದಿದ್ದರಾದರೂ ಒಮ್ಮೆಯೂ ಅವರಿಗೆ ಅನುಮತಿ ಸಿಕ್ಕಿರಲಿಲ್ಲ.

ಆದರೆ ಸತತವಾಗಿ ಪ್ರಯತ್ನಪಟ್ಟ ರಿಯಾನಾ ರಾಜು ಕೊನೆಗೂ ಅವಕಾಶ ಪಡೆದು ಯಶಸ್ವಿಯಾಗಿ ದೇವರ ದರ್ಶನ ಮಾಡಿ ಮುಗಿಸಿದ್ದಾರೆ. ಜನವರಿ 5ರಂದು ಶಬರಿಮಲೆ ತಲುಪಿದ ರಿಯಾನಾ ರಾಜು ಜನವರಿ 5ರಂದು ದರ್ಶನ ಪೂರೈಸಿದ್ದಾಗಿ ಹೇಳಿಕೊಂಡಿದ್ದಾರೆ.

ಇನ್ನು ತಾನು ದೇವಾಲಯ ತಲುಪಿದಾಗ ಅಲ್ಲಿನ ಭಕ್ತರು ಹಾಗೂ ಅರ್ಚಕನಿಂದ ನಿಂದನೆಗೆ ಒಳಗಾದ ವಿಷಯವನ್ನೂ ಸಹ ಬಿಚ್ಚಿಟ್ಟ ರಿಯಾನಾ ರಾಜು ತಾನು ಪುರುಷನಿಂದ ಮಹಿಳೆಯಾಗಿ ಬದಲಾದ ಕಾರಣ ಮಕ್ಕಳನ್ನು ಹೆರಲು ಸಾಧ್ಯವಿಲ್ಲ, ಹೀಗಾಗಿ ದೇವರ ದರ್ಶನ ಪಡೆಯಬಹುದು ಎಂದು ವಿವರಿಸಿದ್ದಾರೆ.

andolana

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

20 mins ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

56 mins ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

2 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

2 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

18 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

20 hours ago