ಜಮ್ಮು (ಪಿಟಿಐ) : ಪಾಸ್ಪೋರ್ಟ್ ಕಾಯ್ದೆ ಉಲ್ಲಂಘನೆ ಹಾಗೂ ಮಾನವ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಹಿಂಗ್ಯಾ ಮುಸ್ಲೀಂ ನಾಯಕರೊಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಬಂಧಿತ ಆರೋಪಿಯನ್ನು ಜಾಫರ್ ಆಲಂ ಎಂದು ಗುರುತಿಸಲಾಗಿದೆ.
ಈತ ರೋಹಿಂಗ್ಯಾಗಳನ್ನು ಅಕ್ರಮವಾಗಿ ಭಾರತ ಮತ್ತು ಇತರ ದೇಶಗಳಿಗೆ ರವಾನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಬಂದ ಸುಳಿವಿನ ಮೇರೆಗೆ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ ಎನ್ಐಎ ಅಧಿಕಾರಿಗಳು ಜಾಫರ್ ಅಲಂನನ್ನು ಬಂಧಿಸಿದ್ದಾರೆ.
ಈ ದಾಳಿಗಳನ್ನು ಮ್ಯಾನ್ಮಾರ್ ವಲಸಿಗರು ವಾಸಿಸುವ ಕೊಳೆಗೇರಿಗಳಿಗೆ ಸೀಮಿತಗೊಳಿಸಲಾಗಿದೆ ಮತ್ತು ಪಾಸ್ಪೋರ್ಟ್ ಕಾಯ್ದೆಯ ಉಲ್ಲಂಘನೆ ಮತ್ತು ಮಾನವ ಕಳ್ಳಸಾಗಣೆಗೆ ಸಂಬಂಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಜಾಫರ್ ಆಲಂ ಅವರನ್ನು ಜಮ್ಮುವಿನ ಬತಿಂಡಿ ಪ್ರದೇಶದಲ್ಲಿನ ಅವರ ತಾತ್ಕಾಲಿಕ ನಿವಾಸದಿಂದ ಮುಂಜಾನೆ 2 ಗಂಟೆಯ ಸುಮಾರಿಗೆ ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…