ರಾಷ್ಟ್ರೀಯ

ಮಾನವ ಕಳ್ಳ ಸಾಗಣೆ ಮಾಡುತ್ತಿದ್ದ ರೋಹಿಂಗ್ಯಾ ನಾಯಕನ ಬಂಧನ

ಜಮ್ಮು (ಪಿಟಿಐ) : ಪಾಸ್‍ಪೋರ್ಟ್ ಕಾಯ್ದೆ ಉಲ್ಲಂಘನೆ ಹಾಗೂ ಮಾನವ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಹಿಂಗ್ಯಾ ಮುಸ್ಲೀಂ ನಾಯಕರೊಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಬಂಧಿತ ಆರೋಪಿಯನ್ನು ಜಾಫರ್ ಆಲಂ ಎಂದು ಗುರುತಿಸಲಾಗಿದೆ.

ಈತ ರೋಹಿಂಗ್ಯಾಗಳನ್ನು ಅಕ್ರಮವಾಗಿ ಭಾರತ ಮತ್ತು ಇತರ ದೇಶಗಳಿಗೆ ರವಾನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಬಂದ ಸುಳಿವಿನ ಮೇರೆಗೆ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ ಎನ್‍ಐಎ ಅಧಿಕಾರಿಗಳು ಜಾಫರ್ ಅಲಂನನ್ನು ಬಂಧಿಸಿದ್ದಾರೆ.

ಈ ದಾಳಿಗಳನ್ನು ಮ್ಯಾನ್ಮಾರ್ ವಲಸಿಗರು ವಾಸಿಸುವ ಕೊಳೆಗೇರಿಗಳಿಗೆ ಸೀಮಿತಗೊಳಿಸಲಾಗಿದೆ ಮತ್ತು ಪಾಸ್‍ಪೋರ್ಟ್ ಕಾಯ್ದೆಯ ಉಲ್ಲಂಘನೆ ಮತ್ತು ಮಾನವ ಕಳ್ಳಸಾಗಣೆಗೆ ಸಂಬಂಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಜಾಫರ್ ಆಲಂ ಅವರನ್ನು ಜಮ್ಮುವಿನ ಬತಿಂಡಿ ಪ್ರದೇಶದಲ್ಲಿನ ಅವರ ತಾತ್ಕಾಲಿಕ ನಿವಾಸದಿಂದ ಮುಂಜಾನೆ 2 ಗಂಟೆಯ ಸುಮಾರಿಗೆ ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

1 hour ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

2 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

2 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

2 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

2 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

2 hours ago