ಜಮ್ಮು (ಪಿಟಿಐ) : ಪಾಸ್ಪೋರ್ಟ್ ಕಾಯ್ದೆ ಉಲ್ಲಂಘನೆ ಹಾಗೂ ಮಾನವ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಹಿಂಗ್ಯಾ ಮುಸ್ಲೀಂ ನಾಯಕರೊಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಬಂಧಿತ ಆರೋಪಿಯನ್ನು ಜಾಫರ್ ಆಲಂ ಎಂದು ಗುರುತಿಸಲಾಗಿದೆ.
ಈತ ರೋಹಿಂಗ್ಯಾಗಳನ್ನು ಅಕ್ರಮವಾಗಿ ಭಾರತ ಮತ್ತು ಇತರ ದೇಶಗಳಿಗೆ ರವಾನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಬಂದ ಸುಳಿವಿನ ಮೇರೆಗೆ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ ಎನ್ಐಎ ಅಧಿಕಾರಿಗಳು ಜಾಫರ್ ಅಲಂನನ್ನು ಬಂಧಿಸಿದ್ದಾರೆ.
ಈ ದಾಳಿಗಳನ್ನು ಮ್ಯಾನ್ಮಾರ್ ವಲಸಿಗರು ವಾಸಿಸುವ ಕೊಳೆಗೇರಿಗಳಿಗೆ ಸೀಮಿತಗೊಳಿಸಲಾಗಿದೆ ಮತ್ತು ಪಾಸ್ಪೋರ್ಟ್ ಕಾಯ್ದೆಯ ಉಲ್ಲಂಘನೆ ಮತ್ತು ಮಾನವ ಕಳ್ಳಸಾಗಣೆಗೆ ಸಂಬಂಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಜಾಫರ್ ಆಲಂ ಅವರನ್ನು ಜಮ್ಮುವಿನ ಬತಿಂಡಿ ಪ್ರದೇಶದಲ್ಲಿನ ಅವರ ತಾತ್ಕಾಲಿಕ ನಿವಾಸದಿಂದ ಮುಂಜಾನೆ 2 ಗಂಟೆಯ ಸುಮಾರಿಗೆ ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…