ನಾಗಪುರ : ಆರೆಸ್ಸೆಸ್ ಭಾರತದ ಸಂಸ್ಕೃತಿ ಹಾಗೂ ಸಂಪ್ರದಾಯವನ್ನು ರಕ್ಷಿಸಿದೆ ಹಾಗೂ ಅಖಂಡ ಭಾರತ ಸಿದ್ಧಾಂತವನ್ನು ಸಂರಕ್ಷಿಸಿದೆ ಎಂದು ಗಾಯಕ ಶಂಕರ್ ಮಹಾದೇವನ್ ಹೇಳಿದ್ದಾರೆ.
ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘಆಯೋಜಿಸಿದ್ದ ವಾರ್ಷಿಕ ವಿಜಯ ದಶಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶಂಕರ್ ಮಹಾದೇವನ್, ಸಂಘ ಪರಿವಾರವು ದೇಶಕ್ಕೆ ನೀಡಿರುವ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
“ನಾನೇನು ಹೇಳಲು ಸಾಧ್ಯ? ನಾನು ಕೇವಲ ನಿಮಗೆ ವಂದಿಸುತ್ತೇನೆ. ನಮ್ಮ ನಮ್ಮ ಸಂಸ್ಕೃತಿ, ನಮ್ಮ ಸಂಪ್ರದಾಯ ಹಾಗೂ ನಮ್ಮ ಅಖಂಡ ಭಾರತ ಸಿದ್ಧಾಂತವನ್ನು ಸಂರಕ್ಷಿಸುವಲ್ಲಿ ಬೇರೆಲ್ಲರಿಗಿಂತ ಆರೆಸ್ಸೆಸ್ ಕೊಡುಗೆ ಅಪಾರವಾಗಿದೆ” ಎಂದು ಅವರು ಪ್ರಶಂಸಿಸಿದ್ದಾರೆ.
ಅಲ್ಲದೆ ಆರೆಸ್ಸೆಸ್ ನ ವಾರ್ಷಿಕ ಕಾರ್ಯಕ್ರಮಕ್ಕೆ ಆಹ್ವಾನಿತನಾಗಿರುವುದಕ್ಕೆ ನಾನು ಅದೃಷ್ಟವಂತನಾಗಿದ್ದೇನೆ ಎಂದೂ ಅವರು ಹೇಳಿದ್ದಾರೆ. ಕಾರ್ಯಕ್ರಮದ ನಂತರ ಅವರು ಆರೆಸ್ಸೆಸ್ ಸಂಸ್ಥಾಪಕ ಕೆ.ಬಿ.ಹಡ್ಗೇವಾರ್ ಅವರ ಸಮಾಧಿಗೂ ಭೇಟಿ ನೀಡಿದರು.
ಕಾರ್ಯಕ್ರಮದಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…