ಲಖನೌ : ಇತ್ತೀಚಿಗೆ ಅಖಿಲೇಶ್ ಯಾದವ್ ನೇತೃತ್ವದ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಮಾಜವಾದಿ ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮೂರು ಬಾರಿ ಸಂಸದರಾಗಿದ್ದ ರವಿ ವರ್ಮಾ ಅವರು ಸೋಮವಾರ ಕಾಂಗ್ರೆಸ್ಗೆ ಸೇರಲಿದ್ದಾರೆ.
“ನಾನು ಸುಮಾರು 25 ವರ್ಷಗಳಿಂದ ಸಮಾಜವಾದಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಕಳೆದ ಕೆಲವು ವರ್ಷಗಳಲ್ಲಿ, ಅಖಿಲೇಶ್ ಯಾದವ್ ಅವರನ್ನು ನೇರವಾಗಿ ಭೇಟಿ ಮಾಡಿ ಪಕ್ಷ ಸೇರಿ ವಿವಧ ಹುದ್ದೆಗಳನ್ನು ಪಡೆದ ಹೊಸಬರು ಯಾವತ್ತೂ ಪಕ್ಷಕ್ಕಾಗಿ ಕೆಲಸ ಮಾಡಿಲ್ಲ. ಈ ನಡುವೆ ಗುತ್ತಿಗೆದಾರರು ಮತ್ತು ಭ್ರಷ್ಟ ಅಧಿಕಾರಿಗಳ ತಂಡ ಹುಟ್ಟಿಕೊಂಡವು. ಪಕ್ಷದಲ್ಲಿ ಜನರಿಗಾಗಿ ಕೆಲಸ ಮಾಡಲು ಯಾರಿಗೂ ಸಮಯವಿಲ್ಲ..” ಎಂದು ವರ್ಮಾ ಹೇಳಿದ್ದಾರೆ.
“ಪಕ್ಷಕ್ಕೆ ಸೇರ್ಪಡೆಯಾದ ಎಲ್ಲಾ ಹೊಸ ಸದಸ್ಯರು ಅಖಿಲೇಶ್ ಯಾದವ್ ಬಳಿಗೆ ಹೋಗಿ ರಾತ್ರೋರಾತ್ರಿ ಲಕ್ಷಾಧಿಪತಿಯಾಗಲು ಬಯಸಿದ್ದರು… ಪರಿಸ್ಥಿತಿ ಹದಗೆಡಲು ಪ್ರಾರಂಭಿಸಿದಾಗ, ನಾನು ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದೆ… ನಾಳೆ ಕಾಂಗ್ರೆಸ್ ಸೇರುತ್ತೆನೆ” ಎಂದು ತಿಳಿಸಿದ್ದಾರೆ.
ಅಖಿಲೇಶ್ ಯಾದವ್ ಮತ್ತು ರಾಹುಲ್ ಗಾಂಧಿ ಇಬ್ಬರೂ ಹಿರಿಯ ರಾಜಕಾರಣಿಗಳಾಗಿದ್ದು, ಅವರ ನಡುವೆ ಹೋಲಿಕೆ ಮಾಡುವುದಿಲ್ಲ. ಆದರೆ ಜನ ರಾಹುಲ್ ಗಾಂಧಿ ಅವರನ್ನು ಅನುಸರಿಸಬೇಕು ಎಂದಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…