ಲಖನೌ : ಇತ್ತೀಚಿಗೆ ಅಖಿಲೇಶ್ ಯಾದವ್ ನೇತೃತ್ವದ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಮಾಜವಾದಿ ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮೂರು ಬಾರಿ ಸಂಸದರಾಗಿದ್ದ ರವಿ ವರ್ಮಾ ಅವರು ಸೋಮವಾರ ಕಾಂಗ್ರೆಸ್ಗೆ ಸೇರಲಿದ್ದಾರೆ.
“ನಾನು ಸುಮಾರು 25 ವರ್ಷಗಳಿಂದ ಸಮಾಜವಾದಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಕಳೆದ ಕೆಲವು ವರ್ಷಗಳಲ್ಲಿ, ಅಖಿಲೇಶ್ ಯಾದವ್ ಅವರನ್ನು ನೇರವಾಗಿ ಭೇಟಿ ಮಾಡಿ ಪಕ್ಷ ಸೇರಿ ವಿವಧ ಹುದ್ದೆಗಳನ್ನು ಪಡೆದ ಹೊಸಬರು ಯಾವತ್ತೂ ಪಕ್ಷಕ್ಕಾಗಿ ಕೆಲಸ ಮಾಡಿಲ್ಲ. ಈ ನಡುವೆ ಗುತ್ತಿಗೆದಾರರು ಮತ್ತು ಭ್ರಷ್ಟ ಅಧಿಕಾರಿಗಳ ತಂಡ ಹುಟ್ಟಿಕೊಂಡವು. ಪಕ್ಷದಲ್ಲಿ ಜನರಿಗಾಗಿ ಕೆಲಸ ಮಾಡಲು ಯಾರಿಗೂ ಸಮಯವಿಲ್ಲ..” ಎಂದು ವರ್ಮಾ ಹೇಳಿದ್ದಾರೆ.
“ಪಕ್ಷಕ್ಕೆ ಸೇರ್ಪಡೆಯಾದ ಎಲ್ಲಾ ಹೊಸ ಸದಸ್ಯರು ಅಖಿಲೇಶ್ ಯಾದವ್ ಬಳಿಗೆ ಹೋಗಿ ರಾತ್ರೋರಾತ್ರಿ ಲಕ್ಷಾಧಿಪತಿಯಾಗಲು ಬಯಸಿದ್ದರು… ಪರಿಸ್ಥಿತಿ ಹದಗೆಡಲು ಪ್ರಾರಂಭಿಸಿದಾಗ, ನಾನು ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದೆ… ನಾಳೆ ಕಾಂಗ್ರೆಸ್ ಸೇರುತ್ತೆನೆ” ಎಂದು ತಿಳಿಸಿದ್ದಾರೆ.
ಅಖಿಲೇಶ್ ಯಾದವ್ ಮತ್ತು ರಾಹುಲ್ ಗಾಂಧಿ ಇಬ್ಬರೂ ಹಿರಿಯ ರಾಜಕಾರಣಿಗಳಾಗಿದ್ದು, ಅವರ ನಡುವೆ ಹೋಲಿಕೆ ಮಾಡುವುದಿಲ್ಲ. ಆದರೆ ಜನ ರಾಹುಲ್ ಗಾಂಧಿ ಅವರನ್ನು ಅನುಸರಿಸಬೇಕು ಎಂದಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…