ರಾಷ್ಟ್ರೀಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಮೊಬೈಲ್ ಸುರಕ್ಷತೆ ಇಲ್ಲ: ಕೇಂದ್ರದಿಂದ ಹೈ ಅಲರ್ಟ್‌

ನವದೆಹಲಿ: ಸ್ಯಾಮ್‌ಸಂಗ್ ಗ್ಯಾಲಕ್ಸಿ ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರಕಾರ ಹೈ ರಿಸ್ಕ್ ಅಲರ್ಟ್ ಘೋಷಿಸಿದೆ.

ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಂ (CERT-In) ಸ್ಯಾಮ್ ಸಂಗ್ ಗ್ಯಾಲಕ್ಸಿ ಹಳೆಯ ಹಾಗೂ ಹೊಸದಾದ ಮೊಬೈಲ್ ಗಳಲ್ಲಿ ಸುರಕ್ಷತೆ ಇಲ್ಲ. ಇದರಿಂದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಮೊಬೈಲ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ.

ಡಿಸೆಂಬರ್ 13ರಂದು ಸುರಕ್ಷತೆಯ ಅಲರ್ಟ್ ಸುತ್ತೊಲೆಯನ್ನು ಕೇಂದ್ರ ಸರಕಾರ ಹೊರಡಿಸಿದ್ದು, ಸುರಕ್ಷತೆಯ ಮಾನದಂಡಗಳನ್ನು ಅನುಸರಿಸಲಾಗಿಲ್ಲ. ಇದರಿಂದ ಸ್ಯಾಮ್ ಸಂಗ್ ಗ್ರಾಹಕರು ತೊಂದರೆಗೆ ಸಿಲುಕಬಹುದು ಎಂದು ಎಚ್ಚರಿಸಲಾಗಿದೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಮೊಬೈಲ್ ಬಳಕೆದಾರರು ಕೂಡಲೇ ತಮ್ಮ ಮೊಬೈಲ್ ಅನ್ನು ಅಪ್ ಡೇಟ್ ಮಾಡಿಕೊಂಡು ಫರ್ಮ್ ವೇರ್ ಮುಂತಾದ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು.

ಇಲ್ಲದಿದ್ದರೆ ನಿಮ್ಮ ಮೊಬೈಲ್ ಹ್ಯಾಕ್ ಆಗುವುದು ಅಥವಾ ನಿಮ್ಮ ಮೊಬೈಲ್ ಡಾಟಾಗಳನ್ನು ಸುಲಭವಾಗಿ ಕದಿಯಬಹುದಾಗಿದೆ ಎಂದು ಎಚ್ಚರಿಕೆಯಲ್ಲಿ ವಿವರಿಸಲಾಗಿದೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

4 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

8 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago