ಹೊಸದಿಲ್ಲಿ: ಸುಪ್ರೀಂ ಕೋರ್ಟ್ ತೀರ್ಪು ತಲೆ ಕೆಳಗೆ ಮಾಡಲು ಮೋದಿ ಸರಕಾರದಿಂದ ಎಸ್ ಬಿ ಐ ಬಳಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.
ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಬುಡಮೇಲುಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಭಾರತೀಯ ಸ್ಟೇಟ್ ಬ್ಯಾಂಕನ್ನು ಉಪಯೋಗಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ.
ಚುನಾವಣಾ ಬಾಂಡ್ ಗಳ ಮೂಲಕ ಸ್ವೀಕರಿಸಲಾಗಿರುವ ದೇಣಿಗೆಗಳ ವಿವರಗಳನ್ನು ಬಹಿರಂಗಗೊಳಿಸಲು ಇನ್ನಷ್ಟು ಸಮಯ ನೀಡಬೇಕೆಂದು ಕೋರಿ ಭಾರತೀಯ ಸ್ಟೇಟ್ ಬ್ಯಾಂಕ್ ಸೋಮವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಬಳಿಕ ಖರ್ಗೆ ಈ ವಾಗ್ದಾಳಿ ನಡೆಸಿದ್ದಾರೆ.
”ಚುನಾವಣಾ ಬಾಂಡ್ ಗಳು ಎಂಬ ಮೋದಿ ಸರಕಾರದ ‘ಕಪ್ಪುಹಣ ಪರಿವರ್ತನೆ’ ಯೋಜನೆಯನ್ನು ಅತ್ಯುನ್ನತ ಸುಪ್ರೀಂ ಕೋರ್ಟೇ ರದ್ದುಪಡಿಸಿದೆ. ಆ ಯೋಜನೆಯು ‘ಅಸಾಂವಿಧಾನಿಕ’, ‘ಮಾಹಿತಿ ಹಕ್ಕಿನ ಉಲ್ಲಂಘನೆ’ ಮತ್ತು ‘ಕಾನೂನುಬಾಹಿರ’ ಎಂಬುದಾಗಿ ಸರ್ವೋಚ್ಛ ನ್ಯಾಯಾಲಯ ಹೇಳಿದೆ.
ಮಾರ್ಚ್ 6ರೊಳಗೆ ದೇಣಿಗೆದಾರರ ವಿವರಗಳನ್ನು ಬಹಿರಂಗಪಡಿಸುವಂತೆ ಭಾರತೀಯ ಸ್ಟೇಟ್ ಬ್ಯಾಂಕ್ ಗೆ ನಿರ್ದೇಶನ ನೀಡಿದೆ. ಆದರೆ, ಚುನಾವಣಾ ಬಾಂಡ್ ಗಳ ಮೂಲಕ ತಾನು ನಡೆಸಿರುವ ಕಳ್ಳ ವ್ಯವಹಾರಗಳನ್ನು ಮುಚ್ಚಿ ಹಾಕಲು ಮೋದಿ ಸರಕಾರವು ದೇಶದ ಅತಿ ದೊಡ್ಡ ಬ್ಯಾಂಕನ್ನು ಗುರಾಣಿಯಾಗಿ ಬಳಸಿಕೊಳ್ಳುತ್ತಿದೆ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…
ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…