ರಾಷ್ಟ್ರೀಯ

ಸುಪ್ರೀಂ ತೀರ್ಪು ತಲೆ ಕೆಳಗೆ ಮಾಡಲು ಎಸ್‌ಬಿಐ ಬಳಕೆ : ಮಲ್ಲಿಕಾರ್ಜುನ ಖರ್ಗೆ

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ತೀರ್ಪು ತಲೆ ಕೆಳಗೆ ಮಾಡಲು ಮೋದಿ ಸರಕಾರದಿಂದ ಎಸ್ ಬಿ ಐ ಬಳಕೆ  ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.

ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಬುಡಮೇಲುಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಭಾರತೀಯ ಸ್ಟೇಟ್ ಬ್ಯಾಂಕನ್ನು ಉಪಯೋಗಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ.

ಚುನಾವಣಾ ಬಾಂಡ್‌ ಗಳ ಮೂಲಕ ಸ್ವೀಕರಿಸಲಾಗಿರುವ ದೇಣಿಗೆಗಳ ವಿವರಗಳನ್ನು ಬಹಿರಂಗಗೊಳಿಸಲು ಇನ್ನಷ್ಟು ಸಮಯ ನೀಡಬೇಕೆಂದು ಕೋರಿ ಭಾರತೀಯ ಸ್ಟೇಟ್ ಬ್ಯಾಂಕ್ ಸೋಮವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಬಳಿಕ ಖರ್ಗೆ ಈ ವಾಗ್ದಾಳಿ ನಡೆಸಿದ್ದಾರೆ.

”ಚುನಾವಣಾ ಬಾಂಡ್‌ ಗಳು ಎಂಬ ಮೋದಿ ಸರಕಾರದ ‘ಕಪ್ಪುಹಣ ಪರಿವರ್ತನೆ’ ಯೋಜನೆಯನ್ನು ಅತ್ಯುನ್ನತ ಸುಪ್ರೀಂ ಕೋರ್ಟೇ ರದ್ದುಪಡಿಸಿದೆ. ಆ ಯೋಜನೆಯು ‘ಅಸಾಂವಿಧಾನಿಕ’, ‘ಮಾಹಿತಿ ಹಕ್ಕಿನ ಉಲ್ಲಂಘನೆ’ ಮತ್ತು ‘ಕಾನೂನುಬಾಹಿರ’ ಎಂಬುದಾಗಿ ಸರ್ವೋಚ್ಛ ನ್ಯಾಯಾಲಯ ಹೇಳಿದೆ.

ಮಾರ್ಚ್ 6ರೊಳಗೆ ದೇಣಿಗೆದಾರರ ವಿವರಗಳನ್ನು ಬಹಿರಂಗಪಡಿಸುವಂತೆ ಭಾರತೀಯ ಸ್ಟೇಟ್ ಬ್ಯಾಂಕ್‌ ಗೆ ನಿರ್ದೇಶನ ನೀಡಿದೆ. ಆದರೆ, ಚುನಾವಣಾ ಬಾಂಡ್‌ ಗಳ ಮೂಲಕ ತಾನು ನಡೆಸಿರುವ ಕಳ್ಳ ವ್ಯವಹಾರಗಳನ್ನು ಮುಚ್ಚಿ ಹಾಕಲು ಮೋದಿ ಸರಕಾರವು ದೇಶದ ಅತಿ ದೊಡ್ಡ ಬ್ಯಾಂಕನ್ನು ಗುರಾಣಿಯಾಗಿ ಬಳಸಿಕೊಳ್ಳುತ್ತಿದೆ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ

andolana

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

2 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

6 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago